ಅಮಿತ್ ಶಾ 
ರಾಜ್ಯ

ಬೆಂಗಳೂರಿನಲ್ಲಿ ನಡೆಯುವ ‘ಅಮೃತ‌ ಮಹೋತ್ಸವ’ ಸಮಾರೋಪ ಸಮಾರಂಭಕ್ಕೆ ಅಮಿತ್ ಶಾಗೆ ಆಹ್ವಾನ

ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಆಶ್ರಯದಲ್ಲಿ ನಡೆಯುತ್ತಿರುವ  “ಅಮೃತ ಭಾರತಿಗೆ ಕನ್ನಡದ ಆರತಿ” ಎರಡನೇ ಹಂತದ ಕಾರ್ಯಕ್ರಮ ನಾಳೆಯಿಂದ  ಆರಂಭವಾಗಲಿದೆ.

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಆಶ್ರಯದಲ್ಲಿ ನಡೆಯುತ್ತಿರುವ  “ಅಮೃತ ಭಾರತಿಗೆ ಕನ್ನಡದ ಆರತಿ” ಎರಡನೇ ಹಂತದ ಕಾರ್ಯಕ್ರಮ ನಾಳೆಯಿಂದ  ಆರಂಭವಾಗಲಿದೆ.

ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಹಾವೇರಿ, ವಿಜಯಪುರ, ಗದಗ, ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಜೂನ್ 25 ರಿಂದ ಈ ಜಿಲ್ಲೆಯ 35 ಸ್ಥಳಗಳಲ್ಲಿ ಅಮೃತ‌ ಮಹೋತ್ಸವ ಕಾರ್ಯಕ್ರಮಗಳು ನಡೆಯುತ್ತವೆ ಎಂದು‌ ಕನ್ನಡ- ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ವಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವರಿಗೆ ಆಹ್ವಾನ
ಆಗಷ್ಟ್ 9 ರಿಂದ 11ರವರೆಗೆ ಅಮೃತ ಮಹೋತ್ಸವದ ಸಮಾರೋಪ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈ ಕಾರ್ಯಕ್ರಮಕ್ಕೆ ಇಲಾಖೆಯಿಂದ ಅಧಿಕೃತ ಆಹ್ವಾನ ನೀಡಲು ನಿರ್ಧರಿಸಲಾಗಿದೆ.

ಹೋರಾಟದ ನೆಲದಲ್ಲಿ ಒಂದು ದಿನ
ಸ್ವಾತಂತ್ರ್ಯ ಹೋರಾಟ ನಡೆದ ರಾಜ್ಯದ ಆಯ್ದ ಏಳು ಸ್ಥಳಗಳಲ್ಲಿ ಹೋರಾಟದ ನೆಲದಲ್ಲಿ ಒಂದು ದಿನ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ ನಾಲ್ಕರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಹೈಸ್ಕೂಲ್ ಮೇಲ್ಪಟ್ಟ ವಿದ್ಯಾರ್ಥಿ ಗಳನ್ನು ಕಾರ್ಯಕ್ರಮಕ್ಕೆ ಹಾಗೂ ವಿವಿಧ ರಂಗಾಯಣಗಳಿಂದ ಆಯೋಜನೆ ಮಾಡಿರುವ ವಿಶೇಷ ನಾಟಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ರಂಗಾಯಣಗಳು ರಚಿಸಿ, ನಿರ್ದೇಶಿಸಿರುವ ನಾಟಕಗಳನ್ನು ಖುದ್ದು ಸಚಿವರೇ ವೀಕ್ಷಿಸಲಿದ್ದಾರೆ. ಉಡುಪಿ ಯಕ್ಷರಂಗಾಯಣದ ನಾಟಕವನ್ನು ಸಚಿವರು ಈಗಾಗಲೇ ವೀಕ್ಷಿಸಿ‌ ಮೆಚ್ಚುಗೆ ಸೂಚಿಸಿದ್ದು, ಶುಕ್ರವಾರ ಶಿವಮೊಗ್ಗ ರಂಗಾಯಣ ನಿರ್ದೇಶಿದ್ದ ನಾಟಕವನ್ನು ವೀಕ್ಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT