ಕಳಪೆ ಕಾಮಗಾರಿ 
ರಾಜ್ಯ

ಬೆಂಗಳೂರು: ಪ್ರಧಾನಿ ಮೋದಿ ಭೇಟಿ ಸಂದರ್ಭ ಕಳಪೆ ರಸ್ತೆ ಕಾಮಗಾರಿಗಾಗಿ ಎಂಜಿನಿಯರ್‌ಗಳಿಗೆ ನೋಟಿಸ್‌

ಕೊಮ್ಮಘಟ್ಟ ಮತ್ತು ಮರಿಯಪ್ಪನಪಾಳ್ಯದಲ್ಲಿ ಟಾರ್ ಕಿತ್ತುಹೋಗಿರುವುದಕ್ಕೆ ಮೂವರು ಇಂಜಿನಿಯರ್ ಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.

ಬೆಂಗಳೂರು: ಕೊಮ್ಮಘಟ್ಟ ಮತ್ತು ಮರಿಯಪ್ಪನಪಾಳ್ಯದಲ್ಲಿ ಟಾರ್ ಕಿತ್ತುಹೋಗಿರುವುದಕ್ಕೆ ಮೂವರು ಇಂಜಿನಿಯರ್ ಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.ಆರ್‌ಆರ್‌ನಗರದ ಕಾರ್ಯಪಾಲಕ ಎಂಜಿನಿಯರ್‌ ಎಂಟಿ ಬಾಲಾಜಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಎಚ್‌ಜೆ ರವಿ ಮತ್ತು ಸಹಾಯಕ ಎಂಜಿನಿಯರ್‌ ಐಕೆ ವಿಶ್ವಾಸ್‌ ಅವರಿಗೆ ನೋಟಿಸ್‌ ನೀಡಲಾಗಿದೆ.

ಪ್ರಧಾನಿ ಮೋದಿಯವರ ಭೇಟಿಯ ವೇಳೆ ಬಿಬಿಎಂಪಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿತ್ತು. ಆದರೆ, ಮೋದಿ ನವದೆಹಲಿಗೆ ತೆರಳಿದ ನಂತರ ಹಲವು ಪ್ರದೇಶಗಳಲ್ಲಿ ಟಾರ್ ಕಿತ್ತು ಬಂದ ನಂತರ ಬಿಬಿಎಂಪಿಯನ್ನು ಹಲವು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಟೀಕಿಸುತ್ತಿವೆ.

ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ನಂತರ ಬಿಬಿಎಂಪಿ  ರಸ್ತೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ,ನಿರ್ಲಕ್ಷ್ಯದ ಶಂಕೆ ವ್ಯಕ್ತಪಡಿಸಿದ್ದು, ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ.

ರಸ್ತೆಗಳು, ಚರಂಡಿಗಳು, ಬೀದಿ ದೀಪಗಳು ಮತ್ತು ಹೊಸದಾಗಿ ಟಾರ್ ಮಾಡಿದ ರಸ್ತೆಗಳಲ್ಲಿ ಬಿಳಿ ಗೆರೆ ಹಾಕಲು 24 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಬಿಬಿಎಂಪಿ ಹೇಳಿಕೊಂಡಿದೆ. ಹೆಚ್ಚಿನ ಅವಧಿಯನ್ನು ಕಾಯ್ದುಕೊಂಡು ಕಾಮಗಾರಿ ನಡೆಸಲಾಗಿದೆ ಎಂದು ವಿಶೇಷ ಆಯುಕ್ತ ರವೀಂದ್ರ ತಿಳಿಸಿದ್ದಾರೆ.

ಕಾಮಗಾರಿಯನ್ನು ಪಾರದರ್ಶಕವಾಗಿ ನಿರ್ವಹಿಸಲಾಗಿದ್ದು, ಸಂಬಂಧಪಟ್ಟ ಗುತ್ತಿಗೆದಾರರಿಗೆ ಸರಿಪಡಿಸಲು ತಿಳಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT