ಕಳಪೆ ಕಾಮಗಾರಿ 
ರಾಜ್ಯ

ಬೆಂಗಳೂರು: ಪ್ರಧಾನಿ ಮೋದಿ ಭೇಟಿ ಸಂದರ್ಭ ಕಳಪೆ ರಸ್ತೆ ಕಾಮಗಾರಿಗಾಗಿ ಎಂಜಿನಿಯರ್‌ಗಳಿಗೆ ನೋಟಿಸ್‌

ಕೊಮ್ಮಘಟ್ಟ ಮತ್ತು ಮರಿಯಪ್ಪನಪಾಳ್ಯದಲ್ಲಿ ಟಾರ್ ಕಿತ್ತುಹೋಗಿರುವುದಕ್ಕೆ ಮೂವರು ಇಂಜಿನಿಯರ್ ಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.

ಬೆಂಗಳೂರು: ಕೊಮ್ಮಘಟ್ಟ ಮತ್ತು ಮರಿಯಪ್ಪನಪಾಳ್ಯದಲ್ಲಿ ಟಾರ್ ಕಿತ್ತುಹೋಗಿರುವುದಕ್ಕೆ ಮೂವರು ಇಂಜಿನಿಯರ್ ಗಳಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.ಆರ್‌ಆರ್‌ನಗರದ ಕಾರ್ಯಪಾಲಕ ಎಂಜಿನಿಯರ್‌ ಎಂಟಿ ಬಾಲಾಜಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಎಚ್‌ಜೆ ರವಿ ಮತ್ತು ಸಹಾಯಕ ಎಂಜಿನಿಯರ್‌ ಐಕೆ ವಿಶ್ವಾಸ್‌ ಅವರಿಗೆ ನೋಟಿಸ್‌ ನೀಡಲಾಗಿದೆ.

ಪ್ರಧಾನಿ ಮೋದಿಯವರ ಭೇಟಿಯ ವೇಳೆ ಬಿಬಿಎಂಪಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿತ್ತು. ಆದರೆ, ಮೋದಿ ನವದೆಹಲಿಗೆ ತೆರಳಿದ ನಂತರ ಹಲವು ಪ್ರದೇಶಗಳಲ್ಲಿ ಟಾರ್ ಕಿತ್ತು ಬಂದ ನಂತರ ಬಿಬಿಎಂಪಿಯನ್ನು ಹಲವು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಟೀಕಿಸುತ್ತಿವೆ.

ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ನಂತರ ಬಿಬಿಎಂಪಿ  ರಸ್ತೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ,ನಿರ್ಲಕ್ಷ್ಯದ ಶಂಕೆ ವ್ಯಕ್ತಪಡಿಸಿದ್ದು, ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ.

ರಸ್ತೆಗಳು, ಚರಂಡಿಗಳು, ಬೀದಿ ದೀಪಗಳು ಮತ್ತು ಹೊಸದಾಗಿ ಟಾರ್ ಮಾಡಿದ ರಸ್ತೆಗಳಲ್ಲಿ ಬಿಳಿ ಗೆರೆ ಹಾಕಲು 24 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಬಿಬಿಎಂಪಿ ಹೇಳಿಕೊಂಡಿದೆ. ಹೆಚ್ಚಿನ ಅವಧಿಯನ್ನು ಕಾಯ್ದುಕೊಂಡು ಕಾಮಗಾರಿ ನಡೆಸಲಾಗಿದೆ ಎಂದು ವಿಶೇಷ ಆಯುಕ್ತ ರವೀಂದ್ರ ತಿಳಿಸಿದ್ದಾರೆ.

ಕಾಮಗಾರಿಯನ್ನು ಪಾರದರ್ಶಕವಾಗಿ ನಿರ್ವಹಿಸಲಾಗಿದ್ದು, ಸಂಬಂಧಪಟ್ಟ ಗುತ್ತಿಗೆದಾರರಿಗೆ ಸರಿಪಡಿಸಲು ತಿಳಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಾಮಪ್ರಸಾತ್ ಮನೋಹರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT