ಬಿಬಿಎಂಪಿ ಕೇಂದ್ರ ಕಚೇರಿ 
ರಾಜ್ಯ

ವಾರ್ಡ್ ಮರುವಿಂಗಡಣೆ: ಆನ್ ಲೈನ್ ನಲ್ಲಿ ಆಕ್ಷೇಪಣೆ ಸಲ್ಲಿಕೆಗೆ ಇಲ್ಲ ಅವಕಾಶ

ವಾರ್ಡ್ ಮರುವಿಂಗಡಣೆ ಕುರಿತು ನಾಗರಿಕರು ಸಲಹೆ, ಪ್ರತಿಕ್ರಿಯೆ ಮತ್ತು ಅಭಿಪ್ರಾಯಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. 

ಬೆಂಗಳೂರು: ವಾರ್ಡ್ ಮರುವಿಂಗಡಣೆ ಕುರಿತು ನಾಗರಿಕರು ಸಲಹೆ, ಪ್ರತಿಕ್ರಿಯೆ ಮತ್ತು ಅಭಿಪ್ರಾಯಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. 

ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದ ಅವರು, ಬಿಬಿಎಂಪಿ ವೆಬ್‌ಸೈಟ್ http://bbmpdelimitation2022.com ನಲ್ಲಿ ಅಪ್‌ಲೋಡ್ ಮಾಡಲಾದ ಕರಡನ್ನು ನಾಗರಿಕರು ಆನ್‌ಲೈನ್‌ನಲ್ಲಿ ನೋಡಬಹುದು, ಆದರೆ ಭೌತಿಕವಾಗಿ ತಮ್ಮ ಅಭಿಪ್ರಾಯಗಳನ್ನು ಮತ್ತು ಪ್ರತಿಕ್ರಿಯೆಯನ್ನು ವಿಕಾಸ ಸೌಧದ 4 ನೇ ಮಹಡಿಯಲ್ಲಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಕಚೇರಿಯಲ್ಲಿ ಸಲ್ಲಿಸಬೇಕು ಎಂದರು.

ತಾಂತ್ರಿಕ ಸಮಸ್ಯೆಗಳಿಂದ ಆನ್‌ಲೈನ್ ಆಯ್ಕೆಯನ್ನು ಮುಚ್ಚಲಾಗಿದೆ: ಬಿಬಿಎಂಪಿ ಚುನಾವಣೆಗೂ, ಪಾಲಿಕೆಗೂ ಯಾವುದೇ ಸಂಬಂಧವಿಲ್ಲದ ಕಾರಣ ಪಾಲಿಕೆ ಪ್ರತಿಕ್ರಿಯೆ ಸ್ವೀಕರಿಸುತ್ತಿಲ್ಲ. ತಾಂತ್ರಿಕ ಸಮಸ್ಯೆಗಳಿಂದ ಆನ್‌ಲೈನ್ ಆಯ್ಕೆಯನ್ನು ಮುಚ್ಚಲಾಗಿದೆ  ಎಂದು ತಿಳಿಸಿದರು.

ಹೊಸ ವಾರ್ಡ್‌ಗಳ ಹೆಸರುಗಳು ಪ್ರದೇಶವನ್ನು ಆಧರಿಸಿಲ್ಲ, ಆದರೆ ರಾಜಕಾರಣಿಗಳು ಮತ್ತು ನಾಯಕರ ಹೆಸರನ್ನು ಏಕೆ ಇಡಲಾಗಿದೆ ಎಂದು ಕೇಳಿದಾಗ, ನಾಗರಿಕರು ಈ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಬಹುದು. ಸಮಗ್ರ ತನಿಖೆ ನಂತರ ತಿದ್ದುಪಡಿಗಳನ್ನು ಪರಿಗಣಿಸಲಾಗುವುದು ಎಂದರು.

ವಾರ್ಡ್ ಮರುವಿಂಗಡಣೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರು, ಕಂದಾಯ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಮತ್ತು ಬೆಂಗಳೂರು ನಗರ ಡಿಸಿ ಸೇರಿದಂತೆ ನಾಲ್ವರು ಸದಸ್ಯರ ಸಮಿತಿಯಿಂದ ಮಾಡಲಾಗಿದೆ. ಆದಾಗ್ಯೂ, ವಾರ್ಡ್‌ಗಳ ಹೆಸರು ಮತ್ತು ಗಾತ್ರವನ್ನು ನಿರ್ಧರಿಸುವಲ್ಲಿ ರಾಜಕೀಯ ಮುಖಂಡರ ಅಭಿಪ್ರಾಯವಿದೆಯೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಲಿಲ್ಲ. 

ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಹೆಚ್ಚಿಸುವುದನ್ನು ಒಳಗೊಂಡಿರುವ ವಾರ್ಡ್ ಮರುವಿಂಗಡಣೆ ಕಾರ್ಯದಲ್ಲಿ ಬೈಟರಾಯನಪುರ ಮತ್ತು ಮಹದೇವಪುರದಲ್ಲಿ ಎರಡು ಪ್ರತ್ಯೇಕಿಸಿದ ಸ್ಥಳವನ್ನು ರಚಿಸಲಾಗಿದೆ ಎಂದು ಎಂದು ಆಯುಕ್ತರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT