ಸಂಗ್ರಹ ಚಿತ್ರ 
ರಾಜ್ಯ

4 ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಸಜ್ಜು: ಅಂದಾಜು 230 ಕೋಟಿ ರೂ., 18 ತಿಂಗಳ ಗಡುವು!

ನಗರದಲ್ಲಿ ಸಂಚಾರ ಸುಗಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಇದರ ಬೆನ್ನಲ್ಲೇ ಮಹಾನಗರ ಪಾಲಿಕೆ ನಾಲ್ಕು ಹೊಸ ಮೇಲ್ಸೇತುವೆ ನಿರ್ಮಾಣದ ಯೋಜನಾ ವರದಿ(ಡಿಪಿಆರ್)ಗೆ ಸರ್ಕಾರದಿಂದ ಅನುಮತಿ ಪಡೆದಿದೆ.

ಬೆಂಗಳೂರು: ನಗರದಲ್ಲಿ ಸಂಚಾರ ಸುಗಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಇದರ ಬೆನ್ನಲ್ಲೇ ಮಹಾನಗರ ಪಾಲಿಕೆ ನಾಲ್ಕು ಹೊಸ ಮೇಲ್ಸೇತುವೆ ನಿರ್ಮಾಣದ ಯೋಜನಾ ವರದಿ(ಡಿಪಿಆರ್)ಗೆ ಸರ್ಕಾರದಿಂದ ಅನುಮತಿ ಪಡೆದಿದೆ.

ಫ್ಲೈಓವರ್‌ ನಿರ್ಮಾಣಕ್ಕಾಗಿ ಬಿಬಿಎಂಪಿ 404 ಕೋಟಿ ರೂಪಾಯಿ ಅನುದಾನ ಪಡೆದಿದೆ. ಇತ್ತಮಡು, ಜೆಸಿ ರಸ್ತೆ, ಸಾರಕ್ಕಿ ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಯ ಮೇಲ್ಸೇತುವೆ ಯೋಜನೆಗಳನ್ನು 230 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು ಇದಕ್ಕಾಗಿ 18 ತಿಂಗಳ ಗಡುವು ಹಾಕಿಕೊಂಡಿದೆ.

ರಾಜ್ಯ ಸರ್ಕಾರದ ಅಮೃತ ನಾಗೋತ್ಥಾನದ ಅಡಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು ಏಳು ಮೇಲ್ಸೇತುವೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಜೆಸಿ ರಸ್ತೆ ಫ್ಲೈಓವರ್ ಒಂದು ಪ್ರಮುಖ ಯೋಜನೆಯಾಗಿದ್ದು, ಒಮ್ಮೆ ಪೂರ್ಣಗೊಂಡ ನಂತರ, ಇದು ಎರಡು ಬದಿಯ ವಾಹನ ಸಂಚಾರದೊಂದಿಗೆ ಸಿಟಿ ಮಾರ್ಕೆಟ್ ಫ್ಲೈಓವರ್ನ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಬಿಬಿಎಂಪಿ, ಯೋಜನೆಗಳ ಮುಖ್ಯ ಎಂಜಿನಿಯರ್ ಲೋಕೇಶ್ ಹೇಳಿದ್ದಾರೆ.

ವರದಿ ಪ್ರಕಾರ, ಇತ್ತಮಡುವಿನಿಂದ ಕಾಮಕ್ಯ ಜಂಕ್ಷನ್‌ಗೆ ಬಿಬಿಎಂಪಿ 40.50 ಕೋಟಿ ರೂ., ಬಸವೇಶ್ವರ ನಗರದಿಂದ ವೆಸ್ಟ್ ಆಫ್ ಕಾರ್ಡ್ ರಸ್ತೆವರೆಗೆ 30.64 ರೂ., ಜೆಸಿ ರಸ್ತೆಯಿಂದ ಹಡ್ಸನ್ ವೃತ್ತಕ್ಕೆ 20. 64 ಕೋಟಿ ರೂ., ಸಾರಕ್ಕಿ ಜಂಕ್ಷನ್‌ನಿಂದ ಕನಕಪುರವರೆಗೆ ಅಂದಾಜು 20.64 ಕೋಟಿ ರೂ. ಹಾಗೂ ಮುಖ್ಯ ರಸ್ತೆಗೆ 130 ಕೋಟಿ ರೂ. ಅಂದಾಜಿಸಲಾಗಿದೆ.

ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ಅವರು ಸಿಎಂ ಸಂಚಾರ ಸುಗಮಗೊಳಿಸಲು ನಗರದ ಕೆಲವೆಡೆ ಮೇಲ್ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ ಎಂದಿದ್ದಾರೆ. ಸಿಎಂ ಕಳೆದ ವಾರ ನಗರದ ವಿವಿಧ ಭಾಗಗಳಲ್ಲಿ ಟ್ರಾಫಿಕ್ ಸಿಂಕ್ರೊನೈಸೇಶನ್‌ಗೆ ತೆರಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ನಗರದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಸಲೆಗಳ ಕೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT