ಬಸವರಾಜ ಬೊಮ್ಮಾಯಿ - ಹರ್ಷ್ ವರ್ಧನ್ ಶ್ರಿಂಗ್ಲಾ 
ರಾಜ್ಯ

ರಾಜ್ಯದಲ್ಲಿ ಜಿ-20 ಶೃಂಗ ಸಭೆ ಆಯೋಜನೆಗೆ ಸಹಕಾರ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ರಾಜ್ಯದಲ್ಲಿ ಜಿ-20 ರಾಷ್ಟ್ರಗಳ ಶೃಂಗ ಸಭೆಗಳನ್ನು ಆಯೋಜಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಜಿ-20 ರಾಷ್ಟ್ರಗಳ ಶೃಂಗ ಸಭೆಗಳನ್ನು ಆಯೋಜಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ತಿಳಿಸಿದ್ದಾರೆ.

ಮಾಜಿ ವಿದೇಶಾಂಗ ಕಾರ್ಯದರ್ಶಿ ಹಾಗೂ ಜಿ-20 ಮುಖ್ಯ ಸಂಯೋಜಕ ಹರ್ಷ್ ವರ್ಧನ್ ಶ್ರಿಂಗ್ಲಾ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಭಾರತದಲ್ಲಿ ಇದೇ ಡಿಸೆಂಬರ್ ನಲ್ಲಿ ಜಿ-20 ಸಭೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರಿಂಗ್ಲಾ ಅವರು, ಜಿ-20 ದೇಶಗಳು ವಿಶ್ವದ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದ್ದು, ಇದೀಗ ಮೊದಲ ಬಾರಿಗೆ ಭಾರತಕ್ಕೆ ಅಧ್ಯಕ್ಷತೆಯ ಅವಕಾಶ ಲಭಿಸಿದೆ. ಈ ಅವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ದೇಶದಾದ್ಯಂತ ಜಿ-20 ಸಭೆಗಳನ್ನು ಆಯೋಜಿಸಲು ಉದ್ದೇಶಿಸಿದೆ. ಅಂತೆಯೇ ಕರ್ನಾಟಕದಲ್ಲಿಯೂ ಸುಮಾರು 10 ಸಭೆಗಳನ್ನು ಆಯೋಜಿಸುವ ಚಿಂತನೆಯಿದೆ. ಇದಕ್ಕೆ ರಾಜ್ಯ ಸರ್ಕಾರದ ಸಹಕಾರ ಹಾಗೂ ಸಲಹೆ ಅಗತ್ಯ ಎಂದು ನುಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಎಲ್ಲ ರಾಷ್ಟ್ರಗಳೊಂದಿಗೆ ಕರ್ನಾಟಕ ಒಂದಲ್ಲ ಒಂದು ರೀತಿಯಿಂದ ನಂಟು ಹೊಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಸಭೆಗಳನ್ನು ಆಯೋಜಿಸುವುದು ಅತ್ಯಂತ ಸೂಕ್ತವೆಂದು ಅಭಿಪ್ರಾಯಪಟ್ಟರು.

ಜಿ-20 ಅಧ್ಯಕ್ಷತೆ ದೊರಕಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದ್ದು, ಪ್ರಧಾನಿಯವರು ಪೂರ್ವ ಹಾಗೂ ಪಾಶ್ಚಿಮಾತ್ಯ ದೇಶಗಳಲ್ಲಿ ಭಾರತಕ್ಕೆ ವಿಶೇಷ ಸ್ಥಾನ ದೊರೆಯುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯದಲ್ಲಿ ಆಯೋಜಿಸುವ ಸಭೆಗಳಲ್ಲಿ ರಾಜ್ಯದ ಆರ್ಥಿಕತೆ, ಔದ್ಯಮಿಕ ವಾತಾವರಣವನ್ನು ಜಿ-20 ದೇಶಗಳಿಗೆ ಮನವರಿಕೆ ಮಾಡುವಂತೆ ಸಲಹೆ ನೀಡಿದರು. ತಂತ್ರಜ್ಞಾನ ಆಧಾರಿತ ಉದ್ಯಮಗಳಿಗೆ ಹೆಸರುವಾಸಿಯಾದ ರಾಜ್ಯವು ಅತಿ ಹೆಚ್ಚು ಸ್ಟಾರ್ಟಪ್ ಗಳನ್ನು ಹೊಂದಿದೆ. ಅತಿ ಹೆಚ್ಚು ಯುನಿಕಾರ್ನ್, ಡೆಕಾಕಾರ್ನ್ ಗಳನ್ನು ಹೊಂದಿರುವ ರಾಜ್ಯ ಕರ್ನಾಟಕ. ಇದರೊಂದಿಗೆ ಮುಂದಿನ ದಿನಗಳಲ್ಲಿ ರಾಜ್ಯವು ಗ್ರೀನ್ ಹೈಡ್ರೋಜನ್ ಉತ್ಪಾದನೆ, ಸೆಮಿಕಂಡಕ್ಟರ್ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT