ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಜಿಎಸ್‌ಟಿ ಕೌನ್ಸಿಲ್ ರಾಜ್ಯಗಳಿಗೆ ತೆರಿಗೆ ಪರಿಹಾರ ವಿಸ್ತರಿಸುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಸೋಮವಾರ ಸಂಜೆ ಚಂಡೀಗಢಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಸೋಮವಾರ ಸಂಜೆ ಚಂಡೀಗಢಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜಿಎಸ್ ಟಿ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

ಚಂಡೀಗಢಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ,  ಜಿ.ಎಸ್. ಟಿ. ಕೌನ್ಸಿಲ್ ರಾಜ್ಯಗಳಿಗೆ ನೀಡುವ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಕೋವಿಡ್ -19 ಸಾಂಕ್ರಾಮಿಕದ ನಂತರ ರಾಜ್ಯದ ತೆರಿಗೆ ಆದಾಯ ಚೇತರಿಸಿಕೊಂಡಿಲ್ಲ ಮತ್ತು ಬೆಳವಣಿಗೆಯೂ ಕುಂಠಿತವಾಗಿದೆ. ಈ ಆಧಾರದ ಮೇಲೆ ಜಿಎಸ್‌ಟಿ ಪರಿಹಾರ ವಿಸ್ತರಣೆಯನ್ನು ಕೋರಿದ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಜಿ ಎಸ್ ಟಿ ತೆರಿಗೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಗ್ರೂಪ್ ಆಫ್ ಮಿನಿಸ್ಟರ್ ಸಭೆ ಈಗಾಗಲೇ ೩ ಬಾರಿ ನಡೆದಿದೆ. ಈ ಕುರಿತು ಮಧ್ಯಂತರ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದೆ. ಎರಡು ದಿನಗಳ ಸಭೆಯ ನಂತರ ಜೂನ್ 30 ರಂದು ಸಿಎಂ ಬೊಮ್ಮಾಯಿ ಅವರು ನಗರಕ್ಕೆ ಹಿಂತಿರುಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಬಕ್ರೀದ್: ಗೋವಿಗೆ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನ ನೀಡಿ: ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ

SCROLL FOR NEXT