ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಜಿಎಸ್‌ಟಿ ಕೌನ್ಸಿಲ್ ರಾಜ್ಯಗಳಿಗೆ ತೆರಿಗೆ ಪರಿಹಾರ ವಿಸ್ತರಿಸುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಸೋಮವಾರ ಸಂಜೆ ಚಂಡೀಗಢಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಸೋಮವಾರ ಸಂಜೆ ಚಂಡೀಗಢಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜಿಎಸ್ ಟಿ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

ಚಂಡೀಗಢಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ,  ಜಿ.ಎಸ್. ಟಿ. ಕೌನ್ಸಿಲ್ ರಾಜ್ಯಗಳಿಗೆ ನೀಡುವ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಕೋವಿಡ್ -19 ಸಾಂಕ್ರಾಮಿಕದ ನಂತರ ರಾಜ್ಯದ ತೆರಿಗೆ ಆದಾಯ ಚೇತರಿಸಿಕೊಂಡಿಲ್ಲ ಮತ್ತು ಬೆಳವಣಿಗೆಯೂ ಕುಂಠಿತವಾಗಿದೆ. ಈ ಆಧಾರದ ಮೇಲೆ ಜಿಎಸ್‌ಟಿ ಪರಿಹಾರ ವಿಸ್ತರಣೆಯನ್ನು ಕೋರಿದ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಜಿ ಎಸ್ ಟಿ ತೆರಿಗೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಗ್ರೂಪ್ ಆಫ್ ಮಿನಿಸ್ಟರ್ ಸಭೆ ಈಗಾಗಲೇ ೩ ಬಾರಿ ನಡೆದಿದೆ. ಈ ಕುರಿತು ಮಧ್ಯಂತರ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದೆ. ಎರಡು ದಿನಗಳ ಸಭೆಯ ನಂತರ ಜೂನ್ 30 ರಂದು ಸಿಎಂ ಬೊಮ್ಮಾಯಿ ಅವರು ನಗರಕ್ಕೆ ಹಿಂತಿರುಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel