ರಾಜ್ಯ

47ನೇ ಜಿಎಸ್ ಟಿ ಕೌನ್ಸಿಲ್ ಸಭೆ: ಇಂದು ಸಂಜೆ ಚಂಡೀಗಢಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣ

Sumana Upadhyaya

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸೋಮವಾರದಿಂದ ಮೂರು ದಿನ ಚಂಡೀಗಢ ಪ್ರವಾಸ ಕೈಗೊಳ್ಳುತ್ತಿದ್ದಾರೆ.

47ನೇ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲು ಅವರು ಚಂಡೀಗಢ ಪ್ರವಾಸ ಕೈಗೊಳ್ಳುತ್ತಿದ್ದು, ಇಂದು ಸಾಯಂಕಾಲ 7 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಂಡೀಗಢ ಪ್ರವಾಸ ಬೆಳೆಸಲಿದ್ದಾರೆ.

ನಾಳೆ ಮತ್ತು ನಾಡಿದ್ದು ಅಂದರೆ ಜೂನ್ 28 ಮತ್ತು 29ರಂದು ಚಂಡೀಗಢದಲ್ಲಿ ನಡೆಯಲಿರುವ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗುತ್ತಾರೆ. ಜೂನ್ 30ರಂದು ಬೆಳಗ್ಗೆ ಚಂಡೀಗಢದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

SCROLL FOR NEXT