ಬೆಂಗಳೂರಿನಲ್ಲಿ ಐಕಿಯಾ ತನ್ನ ಅತಿದೊಡ್ಡ ಮಳಿಗೆಯನ್ನು ತೆರೆದ ನಂತರ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಜನತೆ. 
ರಾಜ್ಯ

ಐಕಿಯಾ ಶಾಪಿಂಗ್ ಮಾಲ್'ಗೆ ಜನಸಾಗರ: ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ತುಮಕೂರು ರಸ್ತೆ ನಾಗಸಂದ್ರ ಸಮೀಪ ಆರಂಭವಾಗಿರುವ ಪ್ರಖ್ಯಾತ ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆ ಐಕಿಯಾ ಶಾಪಿಂಗ್ ಮಾಲ್'ಗೆ ಶನಿವಾರ ಮತ್ತು ಭಾನುವಾರ ಸಾಗರೋಪಾದಿಯಲ್ಲಿ ಗ್ರಾಹಕರು ಹರಿದು ಬಂದಿದ್ದು, ಇದರ ಪರಿಣಾಮ ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಎದುರಾಗಿ, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. 

ಬೆಂಗಳೂರು: ತುಮಕೂರು ರಸ್ತೆ ನಾಗಸಂದ್ರ ಸಮೀಪ ಆರಂಭವಾಗಿರುವ ಪ್ರಖ್ಯಾತ ಗೃಹೋಪಯೋಗಿ ವಸ್ತುಗಳ ಮಾರಾಟ ಮಳಿಗೆ ಐಕಿಯಾ ಶಾಪಿಂಗ್ ಮಾಲ್'ಗೆ ಶನಿವಾರ ಮತ್ತು ಭಾನುವಾರ ಸಾಗರೋಪಾದಿಯಲ್ಲಿ ಗ್ರಾಹಕರು ಹರಿದು ಬಂದಿದ್ದು, ಇದರ ಪರಿಣಾಮ ತುಮಕೂರು ರಸ್ತೆಯಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಎದುರಾಗಿ, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು. 

ಈಗಾಗಲೇ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ಹಿನ್ನೆಲೆಯಲ್ಲಿ ತುಮಕೂರು ಹೆದ್ದಾರಿಯ ಸರ್ವೀಸ್ ರಸ್ತೆಗಳಲ್ಲಿ ನಿಧಾನಗತಿ ಸಂಚಾರದಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದೀಗ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಐಕಿಯಾ ಮಾಲ್ ನಿಂದ ಮತ್ತೊಂದು ಅಡ್ಡಿ ಎದುರಾದಂತಾಗಿದೆ. ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜನರು ಐಕಿಯಾ ವಿರುದ್ಧ ಕಿಡಿಕಾರಿದ್ದು ಕೂಡ ಕಂಡು ಬಂದಿತ್ತು. 

ಮೆಟ್ರೋ ಅಧಿಕಾರಿಯೊಬ್ಬರು ಮಾತನಾಡಿ, ಐಕಿಯಾ ಪ್ರಾರಂಭವಾದಾಗಿನಿಂದ ನಾಲ್ಕು ದಿನಗಳಲ್ಲಿ (ಶನಿವಾರದವರೆಗೆ) ಬಿಎಂಆರ್'ಸಿಎಲ್'ನ ಸರಾಸರಿ ಪ್ರಯಾಣಿಕರ ಸಂಖ್ಯೆ 4,68,936 ರಿಂದ 4,78,829 ಕ್ಕೆ ಏರಿದೆ ಎಂದು ಹೇಳಿದ್ದಾರೆ. 

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿಯೂ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಜೂನ್ 22 - 19,266, ಜೂನ್ 23 - 17,098, ಜೂನ್ 24 - 18,515 ಮತ್ತು ಜೂನ್ 25 - 30,067 ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. 

ಆರ್'ಪಿಜಿ ಗ್ರೂಪ್‌ನ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಟ್ವೀಟ್ ಮಾಡಿ, “ಇದು ಸರ್ಕಾರ ರಚಿಸಲು ಮಹಾರಾಷ್ಟ್ರದಲ್ಲಿ ಶಾಸಕರು ಸರತಿ ಸಾಲಿನಲ್ಲಿ ನಿಂತಿರುವುದಲ್ಲ, ನಮ್ಮ ದೇಶವನ್ನು ಪ್ರವೇಶಿಸಲು ವಲಸೆಗರು ಸಾಲಿನಲ್ಲಿ ನಿಂತಿರುವುದಲ್ಲ... ದರ್ಶನಕ್ಕಾಗಿ ತಿರುಪತಿಯಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಯಾತ್ರಾರ್ಥಿಗಳೂ ಅಲ್ಲ, ಐಕಿಯಾ ಮಳಿಗೆ ಆರಂಭ ಹಿನ್ನೆಲೆಯಲ್ಲಿ ನಿಂತಿರುವ ಜನರು ಎಂದು ಹೇಳಿದ್ದಾರೆ. 

ಎಂಡಿ ಅಂಜುಮ್ ಪರ್ವೇಜ್ ಮಾತನಾಡಿ, ಬಿಎಂಆರ್‌ಸಿಎಲ್ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಕೌಂಟರ್‌ಗಳ ಸಂಖ್ಯೆಯನ್ನು 10 ಕ್ಕೆ ಹೆಚ್ಚಿಸಲಾಗಿದೆ. ಶನಿವಾರ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಾಲ್ ಬಾಗಿಲನ್ನು ಬೇಗನೆ ಮುಚ್ಚಲಾಗಿತ್ತು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT