ಸಾಂದರ್ಭಿಕ ಚಿತ್ರ 
ರಾಜ್ಯ

ಕೊಡಗಿನಲ್ಲಿ ಲಘು ಭೂಕಂಪನ; ಒಂದು ವಾರದಲ್ಲಿ 3ನೇ ಬಾರಿ ಭೂಮಿ ನಡುಗಿದ ಅನುಭವ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಲಘು ಭೂಕಂಪನ ಸಂಭವಿಸಿದ್ದು, ಇದು ವಾರದ ಅಂತರದಲ್ಲಿ ಸಂಭವಿಸಿದ 3ನೇ ಕಂಪನವಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಲಘು ಭೂಕಂಪನ ಸಂಭವಿಸಿದ್ದು, ಇದು ವಾರದ ಅಂತರದಲ್ಲಿ ಸಂಭವಿಸಿದ 3ನೇ ಕಂಪನವಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಭೂಮಿ ಕಂಪಿಸಿದ್ದು, ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ, ವನಚಲ್, ಕರಿಕೆ, ಚೆಯ್ಯಂಡಾಣೆ ಸೇರಿದಂತೆ ವಿವಿಧ ಕಡೆ 7.45 ಕ್ಕೆ ಭೂಮಿ ಕಂಪಿಸಿದೆ. ಮನೆಯಲ್ಲಿದ್ದ ಪಾತ್ರೆಗಳು, ವಸ್ತುಗಳು ಅಲುಗಾಡಿದ್ದು, ಭಯಭೀತರಾದ ಜನ ಕೆಲ ಕಾಲ ರಸ್ತೆಗೆ ಬಂದು ನಿಲ್ಲುವಂತಾಗಿತ್ತು. 

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಪರಿಣತ ಅನನ್ಯ ವಾಸುದೇವ್, '5 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಸಾಕಷ್ಟು ಕಡೆಗಳಿಂದ ಜನರು ಮಾಹಿತಿ ನೀಡಿದ್ದಾರೆ. ವಿಷಯವನ್ನು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಗಮನಕ್ಕೆ ತರಲಾಗಿದೆ‌. ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವ ದತ್ತಾಂಶಗಳ ಪರಿಶೀಲನೆ ನಡೆದಿದೆ. ಆ ಬಳಿಕ ಕಂಪನದ ತೀವ್ರತೆ ಗೊತ್ತಾಗಲಿದೆ. ಸದ್ಯಕ್ಕೆ ಜನರು ಆತಂಕಪಡುವ ಅಗತ್ಯ ಇಲ್ಲ' ಎಂದು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿರುವುದು ವಾರದಲ್ಲಿ ಇದು ಮೂರನೆ ಬಾರಿಯಾಗಿದೆ. 

ಸಿಸಿಟಿವಿ ದೃಶ್ಯ ವೈರಲ್
3.4 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಮಂಗಳವಾರ ಸಂಪಾಜೆಯಲ್ಲಿ ಕಂಪಿಸಿದ ನಂತರ ನಾಯಿಯೊಂದು ಭಯಭೀತರಾಗಿರುವುದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ದಾಖಲಾಗಿದೆ. ಕಳೆದ ವರ್ಷವೂ ನೆರೆಯ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಭೂಕಂಪ ಸಂಭವಿಸಿತ್ತು. ಸಂಪಾಜೆಯಲ್ಲಿ ಸ್ಥಳೀಯರಿಗೂ ಕಂಪನ ಅನುಭವವಾಗಿದ್ದು, ಇದು 2.7 ತೀವ್ರತೆಯನ್ನು ಹೊಂದಿತ್ತು ಮತ್ತು ಭೂಕಂಪದ ಕೇಂದ್ರವು ಮಡಿಕೇರಿಯ ಕರಿಕೆ ಗ್ರಾಮ ಪಂಚಾಯಿತಿಯಿಂದ ವಾಯುವ್ಯಕ್ಕೆ 4.7 ಕಿಮೀ ದೂರದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT