5ನೇ ಟಿ20 ಪಂದ್ಯ ಸ್ಥಗಿತ 
ರಾಜ್ಯ

ಭಾರತ vs ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯ ರದ್ದು: ವೀಕ್ಷಕರಿಗೆ ಟಿಕೆಟ್ ನ ಶೇ.50ರಷ್ಟು ಹಣ ಪಾವತಿಗೆ KSCA ನಿರ್ಧಾರ

ಜೂನ್ 19 ರಂದು ನಡೆದಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಮಳೆ ಕಾರಣದಿಂದಾಗಿ ರದ್ದಾದ ಹಿನ್ನಲೆಯಲ್ಲಿ ಪ್ರೇಕ್ಷಕರ ಟಿಕೆಟ್ ಹಣದಲ್ಲಿ ಶೇ.50ರಷ್ಟು ಮರು ಪಾವತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ.

ಬೆಂಗಳೂರು: ಜೂನ್ 19 ರಂದು ನಡೆದಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಮಳೆ ಕಾರಣದಿಂದಾಗಿ ರದ್ದಾದ ಹಿನ್ನಲೆಯಲ್ಲಿ ಪ್ರೇಕ್ಷಕರ ಟಿಕೆಟ್ ಹಣದಲ್ಲಿ ಶೇ.50ರಷ್ಟು ಮರು ಪಾವತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ.

ಈ ಕುರಿತು ಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಟಿಕೆಟ್ ಹೊಂದಿರುವವರಿಗೆ ಎಲ್ಲರಿಗೂ ಟಿಕೆಟ್‌ನ ಮುಖಬೆಲೆಯ ಶೇಕಡಾ 50 ರಷ್ಟು ಹಣ ಮರುಪಾವತಿ ನೀಡಲು ನಿರ್ಧರಿಸಿದೆ.

ಆನ್‌ಲೈನ್‌ನಲ್ಲಿ ಮತ್ತು ಬಾಕ್ಸ್ ಆಫೀಸ್‌ನಲ್ಲಿ ಟಿಕೆಟ್‌ಗಳನ್ನು ಖರೀದಿಸಿದ ಪ್ರೇಕ್ಷಕರು ಜುಲೈ 1, 2 ಮತ್ತು 3 ರಂದು ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ಮರುಪಾವತಿಯನ್ನು ಕ್ಲೈಮ್ ಮಾಡಬಹುದು ಎಂದು ಸಂಸ್ಥೆ ಹೇಳಿದೆ. 

ಆದರೆ ಹಣ ಮರುಪಾವತಿಗೆ ಷರತ್ತು ವಿಧಿಸಲಾಗಿದ್ದು, ತಮ್ಮ ಮೂಲ ಟಿಕೆಟ್ ಅನ್ನು ಉಳಿಸಿಕೊಂಡವರಿಗೆ ಮಾತ್ರ ಮರುಪಾವತಿ ಮಾಡಲಾಗುತ್ತದೆ ಮತ್ತು ಇದು ಪರಿಶೀಲನೆಯಂತಹ ಷರತ್ತುಗಳಿಗೆ ಒಳಪಟ್ಟಿರುತ್ತದೆ. ಟಿಕೆಟ್‌ನ ಭದ್ರತಾ ವೈಶಿಷ್ಟ್ಯಗಳು ಅಂದರೆ ಟಿಕೆಟ್‌ಗಳನ್ನು ಹಾಳು ಮಾಡಿರಬಾರದು / ವಿರೂಪಗೊಳಿಸಬಾರದು / ಹರಿದಿರುವುದು / ತಿದ್ದಿ ಬರೆಯಬಾರದು ಮತ್ತು ಟಿಕೆಟ್ ಗೋಚರತೆಯನ್ನು ಕಡಿಮೆ ಮಾಡಿರಬಾರದು ಎಂದು ಸೂಚಿಸಲಾಗಿದೆ. ಮರುಪಾವತಿಯನ್ನು ಕ್ಲೈಮ್ ಮಾಡಲು ಪ್ರತಿ ವ್ಯಕ್ತಿಗೆ ಗರಿಷ್ಠ ಐದು ಟಿಕೆಟ್‌ಗಳನ್ನು ಅನುಮತಿಸಲಾಗಿದೆ ಮತ್ತು ಯಾವುದೇ ಕಾಂಪ್ಲಿಮೆಂಟರಿ ಟಿಕೆಟ್‌ಗಳು ಈ ಮರುಪಾವತಿಗೆ ಅರ್ಹವಾಗಿರುವುದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ