5ನೇ ಟಿ20 ಪಂದ್ಯ ಸ್ಥಗಿತ 
ರಾಜ್ಯ

ಭಾರತ vs ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯ ರದ್ದು: ವೀಕ್ಷಕರಿಗೆ ಟಿಕೆಟ್ ನ ಶೇ.50ರಷ್ಟು ಹಣ ಪಾವತಿಗೆ KSCA ನಿರ್ಧಾರ

ಜೂನ್ 19 ರಂದು ನಡೆದಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಮಳೆ ಕಾರಣದಿಂದಾಗಿ ರದ್ದಾದ ಹಿನ್ನಲೆಯಲ್ಲಿ ಪ್ರೇಕ್ಷಕರ ಟಿಕೆಟ್ ಹಣದಲ್ಲಿ ಶೇ.50ರಷ್ಟು ಮರು ಪಾವತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ.

ಬೆಂಗಳೂರು: ಜೂನ್ 19 ರಂದು ನಡೆದಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಮಳೆ ಕಾರಣದಿಂದಾಗಿ ರದ್ದಾದ ಹಿನ್ನಲೆಯಲ್ಲಿ ಪ್ರೇಕ್ಷಕರ ಟಿಕೆಟ್ ಹಣದಲ್ಲಿ ಶೇ.50ರಷ್ಟು ಮರು ಪಾವತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ.

ಈ ಕುರಿತು ಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಟಿಕೆಟ್ ಹೊಂದಿರುವವರಿಗೆ ಎಲ್ಲರಿಗೂ ಟಿಕೆಟ್‌ನ ಮುಖಬೆಲೆಯ ಶೇಕಡಾ 50 ರಷ್ಟು ಹಣ ಮರುಪಾವತಿ ನೀಡಲು ನಿರ್ಧರಿಸಿದೆ.

ಆನ್‌ಲೈನ್‌ನಲ್ಲಿ ಮತ್ತು ಬಾಕ್ಸ್ ಆಫೀಸ್‌ನಲ್ಲಿ ಟಿಕೆಟ್‌ಗಳನ್ನು ಖರೀದಿಸಿದ ಪ್ರೇಕ್ಷಕರು ಜುಲೈ 1, 2 ಮತ್ತು 3 ರಂದು ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ಮರುಪಾವತಿಯನ್ನು ಕ್ಲೈಮ್ ಮಾಡಬಹುದು ಎಂದು ಸಂಸ್ಥೆ ಹೇಳಿದೆ. 

ಆದರೆ ಹಣ ಮರುಪಾವತಿಗೆ ಷರತ್ತು ವಿಧಿಸಲಾಗಿದ್ದು, ತಮ್ಮ ಮೂಲ ಟಿಕೆಟ್ ಅನ್ನು ಉಳಿಸಿಕೊಂಡವರಿಗೆ ಮಾತ್ರ ಮರುಪಾವತಿ ಮಾಡಲಾಗುತ್ತದೆ ಮತ್ತು ಇದು ಪರಿಶೀಲನೆಯಂತಹ ಷರತ್ತುಗಳಿಗೆ ಒಳಪಟ್ಟಿರುತ್ತದೆ. ಟಿಕೆಟ್‌ನ ಭದ್ರತಾ ವೈಶಿಷ್ಟ್ಯಗಳು ಅಂದರೆ ಟಿಕೆಟ್‌ಗಳನ್ನು ಹಾಳು ಮಾಡಿರಬಾರದು / ವಿರೂಪಗೊಳಿಸಬಾರದು / ಹರಿದಿರುವುದು / ತಿದ್ದಿ ಬರೆಯಬಾರದು ಮತ್ತು ಟಿಕೆಟ್ ಗೋಚರತೆಯನ್ನು ಕಡಿಮೆ ಮಾಡಿರಬಾರದು ಎಂದು ಸೂಚಿಸಲಾಗಿದೆ. ಮರುಪಾವತಿಯನ್ನು ಕ್ಲೈಮ್ ಮಾಡಲು ಪ್ರತಿ ವ್ಯಕ್ತಿಗೆ ಗರಿಷ್ಠ ಐದು ಟಿಕೆಟ್‌ಗಳನ್ನು ಅನುಮತಿಸಲಾಗಿದೆ ಮತ್ತು ಯಾವುದೇ ಕಾಂಪ್ಲಿಮೆಂಟರಿ ಟಿಕೆಟ್‌ಗಳು ಈ ಮರುಪಾವತಿಗೆ ಅರ್ಹವಾಗಿರುವುದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ': Sam Curran ಅತ್ಯುತ್ಸಾಹ!

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?

SCROLL FOR NEXT