5ನೇ ಟಿ20 ಪಂದ್ಯ ಸ್ಥಗಿತ 
ರಾಜ್ಯ

ಭಾರತ vs ದಕ್ಷಿಣ ಆಫ್ರಿಕಾ 5ನೇ ಟಿ20 ಪಂದ್ಯ ರದ್ದು: ವೀಕ್ಷಕರಿಗೆ ಟಿಕೆಟ್ ನ ಶೇ.50ರಷ್ಟು ಹಣ ಪಾವತಿಗೆ KSCA ನಿರ್ಧಾರ

ಜೂನ್ 19 ರಂದು ನಡೆದಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಮಳೆ ಕಾರಣದಿಂದಾಗಿ ರದ್ದಾದ ಹಿನ್ನಲೆಯಲ್ಲಿ ಪ್ರೇಕ್ಷಕರ ಟಿಕೆಟ್ ಹಣದಲ್ಲಿ ಶೇ.50ರಷ್ಟು ಮರು ಪಾವತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ.

ಬೆಂಗಳೂರು: ಜೂನ್ 19 ರಂದು ನಡೆದಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ನೇ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಮಳೆ ಕಾರಣದಿಂದಾಗಿ ರದ್ದಾದ ಹಿನ್ನಲೆಯಲ್ಲಿ ಪ್ರೇಕ್ಷಕರ ಟಿಕೆಟ್ ಹಣದಲ್ಲಿ ಶೇ.50ರಷ್ಟು ಮರು ಪಾವತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ನಿರ್ಧರಿಸಿದೆ.

ಈ ಕುರಿತು ಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಟಿಕೆಟ್ ಹೊಂದಿರುವವರಿಗೆ ಎಲ್ಲರಿಗೂ ಟಿಕೆಟ್‌ನ ಮುಖಬೆಲೆಯ ಶೇಕಡಾ 50 ರಷ್ಟು ಹಣ ಮರುಪಾವತಿ ನೀಡಲು ನಿರ್ಧರಿಸಿದೆ.

ಆನ್‌ಲೈನ್‌ನಲ್ಲಿ ಮತ್ತು ಬಾಕ್ಸ್ ಆಫೀಸ್‌ನಲ್ಲಿ ಟಿಕೆಟ್‌ಗಳನ್ನು ಖರೀದಿಸಿದ ಪ್ರೇಕ್ಷಕರು ಜುಲೈ 1, 2 ಮತ್ತು 3 ರಂದು ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ಮರುಪಾವತಿಯನ್ನು ಕ್ಲೈಮ್ ಮಾಡಬಹುದು ಎಂದು ಸಂಸ್ಥೆ ಹೇಳಿದೆ. 

ಆದರೆ ಹಣ ಮರುಪಾವತಿಗೆ ಷರತ್ತು ವಿಧಿಸಲಾಗಿದ್ದು, ತಮ್ಮ ಮೂಲ ಟಿಕೆಟ್ ಅನ್ನು ಉಳಿಸಿಕೊಂಡವರಿಗೆ ಮಾತ್ರ ಮರುಪಾವತಿ ಮಾಡಲಾಗುತ್ತದೆ ಮತ್ತು ಇದು ಪರಿಶೀಲನೆಯಂತಹ ಷರತ್ತುಗಳಿಗೆ ಒಳಪಟ್ಟಿರುತ್ತದೆ. ಟಿಕೆಟ್‌ನ ಭದ್ರತಾ ವೈಶಿಷ್ಟ್ಯಗಳು ಅಂದರೆ ಟಿಕೆಟ್‌ಗಳನ್ನು ಹಾಳು ಮಾಡಿರಬಾರದು / ವಿರೂಪಗೊಳಿಸಬಾರದು / ಹರಿದಿರುವುದು / ತಿದ್ದಿ ಬರೆಯಬಾರದು ಮತ್ತು ಟಿಕೆಟ್ ಗೋಚರತೆಯನ್ನು ಕಡಿಮೆ ಮಾಡಿರಬಾರದು ಎಂದು ಸೂಚಿಸಲಾಗಿದೆ. ಮರುಪಾವತಿಯನ್ನು ಕ್ಲೈಮ್ ಮಾಡಲು ಪ್ರತಿ ವ್ಯಕ್ತಿಗೆ ಗರಿಷ್ಠ ಐದು ಟಿಕೆಟ್‌ಗಳನ್ನು ಅನುಮತಿಸಲಾಗಿದೆ ಮತ್ತು ಯಾವುದೇ ಕಾಂಪ್ಲಿಮೆಂಟರಿ ಟಿಕೆಟ್‌ಗಳು ಈ ಮರುಪಾವತಿಗೆ ಅರ್ಹವಾಗಿರುವುದಿಲ್ಲ ಎಂದೂ ಸ್ಪಷ್ಟಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT