ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜಸ್ತಾನದ ಉದಯಪುರದಲ್ಲಿ ಟೈಲರ್ ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿ

ರಾಜಸ್ತಾನದ ಉದಯಪುರದಲ್ಲಿ ಟೈಲರ್ ನ್ನು ಬರ್ಬರವಾಗಿ ಹತ್ಯೆ ಮಾಡಿದ್ದು ಅಮಾನವೀಯ ಮತ್ತು ಅತ್ಯಂತ ಹೇಯ ಕೃತ್ಯ. ಇದನ್ನು ಗಂಭೀರವಾಗಿ ತೆಗೆದುಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪೂರ್ಣ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ರಾಜಸ್ತಾನದ ಉದಯಪುರದಲ್ಲಿ ಟೈಲರ್ ನ್ನು ಬರ್ಬರವಾಗಿ ಹತ್ಯೆ ಮಾಡಿದ್ದು ಅಮಾನವೀಯ ಮತ್ತು ಅತ್ಯಂತ ಹೇಯ ಕೃತ್ಯ. ಇದು ಭಯೋತ್ಪಾದಕ ಕೃತ್ಯ, ಅದರ ಹಿಂದೆ ಬಹಳ ದೊಡ್ಡ ಅಂತಾರಾಷ್ಟ್ರೀಯ ಷಡ್ಯಂತ್ರವಿದ್ದು, ಅವರನ್ನು ಗಲ್ಲಿಗೇರಿಸಬೇಕು. ಇದನ್ನು ಗಂಭೀರವಾಗಿ ತೆಗೆದುಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪೂರ್ಣ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉದಯಪುರ ಘಟನೆಯ ಹಿಂದೆ ಯಾರಿದ್ದಾರೆ, ಯಾವ ಸಂಘ-ಸಂಸ್ಥೆಗಳಿವೆ ಎಂದು ಸಂಪೂರ್ಣ ತನಿಖೆಯಿಂದ ಹೊರಗೆಬರಬೇಕು. ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಕೈವಾಡವಿರುವ ಸಾಧ್ಯತೆಯಿದೆ ಎಂದರು.

ಇಂದಿಗೆ ದೇಶಾದ್ಯಂತ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಗೆ ಬಂದು 5 ವರ್ಷವಾಗಿದೆ. ಜಿಎಸ್ ಟಿಯಲ್ಲಿನ ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು ಕಾನೂನು ಸಮಿತಿಯಿರುತ್ತದೆ. ಇನ್ನೊಂದು ಫಿಟ್ ಮೆಂಟ್ ಕಮಿಟಿಯಿರುತ್ತದೆ (ಹೊಂದಾಣಿಕೆ ಸಮಿತಿ). ಅದರ ಶಿಫಾರಸುಗಳನ್ನು ಕೂಡ ತೆಗೆದುಕೊಂಡಿದ್ದೇವೆ. ಮೊನ್ನೆ ಚಂಡೀಗಢದಲ್ಲಿ ನಡೆದ 47ನೇ ಜಿಎಸ್ ಟಿ ಸಭೆಯಲ್ಲಿ ಪರಿಹಾರ ವಿಸ್ತರಣೆ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಅಂತಿಮ ನಿರ್ಣಯ ತೆಗೆದುಕೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ಹೇಳಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT