ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿಯಲ್ಲಿ ಪ್ರಾರಂಭವಾಗಲಿದೆ ವೈಮಾನಿಕ ತರಬೇತಿ ಶಾಲೆ!

ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕಲಬುರಗಿ ಯಲ್ಲಿ ವೈಮಾನಿಕ ತರಬೇತಿ ಶಾಲೆಗೆ ಒಪ್ಪಿಗೆ ನೀಡಿದ್ದು, ಇನ್ನು ಮುಂದೆ ಉತ್ತರ ಕರ್ನಾಟಕ ಭಾಗದ ಯುವಕರು ಇಲ್ಲಿಯೇ ಪೈಲಟ್ ತರಬೇತಿ ಪಡೆಯಬಹುದು.

ಬೆಂಗಳೂರು: ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕಲಬುರಗಿ ಯಲ್ಲಿ ವೈಮಾನಿಕ ತರಬೇತಿ ಶಾಲೆಗೆ ಒಪ್ಪಿಗೆ ನೀಡಿದ್ದು, ಇನ್ನು ಮುಂದೆ ಉತ್ತರ ಕರ್ನಾಟಕ ಭಾಗದ ಯುವಕರು ಇಲ್ಲಿಯೇ ಪೈಲಟ್ ತರಬೇತಿ ಪಡೆಯಬಹುದು ಎಂದು ವಿಮಾನ ನಿಲ್ದಾಣ ನಿರ್ದೇಶಕರು ಕೂ ಮಾಡಿದ್ದಾರೆ.

ಏಷ್ಯಾ ಫೆಸಿಪಿಕ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿ ಮತ್ತು 100 ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಅಗತ್ಯವಿರುವ ಭೂಮಿ ಮತ್ತು ಮೂಲ ಸೌಕರ್ಯಗಳು ಪ್ರಾಧಿಕಾರ ಒದಗಿಸಿದ್ದು, ಇನ್ನು ಮುಂದೆ ಪೈಲಟ್ ತರಬೇತಿ ಪಡೆಯಲು ಉತ್ತರ ಕರ್ನಾಟಕ ಭಾಗದ ಯುವಕರು ಮುಂಬೈ, ಹೈದರಾಬಾದ್, ಬೆಂಗಳೂರು ನಗರಕ್ಕೆ ಹೋಗುವುದು ತಪ್ಪಲಿದೆ ಎಂದು ಅವರು ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬರುತ್ತಿರುವ ವೈಮಾನಿಕ ತರಬೇತಿ ಸಂಸ್ಥೆಗಳಿಂದ ಇಲ್ಲಿನ ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ಅವಕಾಶ ಸಿಗಲಿದೆ. ಸುಮಾರು 100 ಜನರು ಇಲ್ಲಿ ಪೈಲಟ್ ತರಬೇತಿ ಪಡೆಯಬಹುದಾಗಿದೆ. ಜೊತೆಗೆ ಇದರಿಂದ ಈ ಭಾಗದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ’ ಎಂದು ಅವರು ತಿಳಿಸಿದ್ದಾರೆ.

ಕಳೆದ ವರ್ಷ ರಾಜ್ಯದಲ್ಲಿ 5 ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿತ್ತು. ಈ ಕುರಿತು ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸಹ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಮೊದಲು ಬೆಂಗಳೂರಿನ ಜಕ್ಕೂರಿನಲ್ಲಿ ಮಾತ್ರ ವೈಮಾನಿಕ ತರಬೇತಿ ಶಾಲೆ ಇತ್ತು. ಈಗ ಕಲಬುರಗಿ , ಹುಬ್ಬಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿಯೂ ತರಬೇತಿ ಶಾಲೆ ಇದೆ. ಇದರಿಂದಾಗಿ ರಾಜ್ಯದ ಯುಕವರು ಇಲ್ಲಿಯೇ ತರಬೇತಿ ಪಡೆಯಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT