ಸಂಗ್ರಹ ಚಿತ್ರ 
ರಾಜ್ಯ

ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ನಿಷೇಧ

ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮೇಲೆ ನಿಷೇಧ ಹೇರಲಾಗುತ್ತಿದೆ.

ಬೆಂಗಳೂರು: ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮೇಲೆ ನಿಷೇಧ ಹೇರಲಾಗುತ್ತಿದೆ.

ಹೌದು.. ಜುಲೈ 1, 2022 ರಿಂದ ದೇಶಾದ್ಯಂತ ಏಕ-ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿದ್ದು, ಕರ್ನಾಟಕ ಸರ್ಕಾರವು 2016 ರಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹೊರಡಿಸಿದ ಈ ಆದೇಶವು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB) ಗಡಿ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಲು ಹೆಚ್ಚಿನ ಬಲ ನೀಡಿದಂತಾಗಿದೆ.

KSPCB ಜುಲೈ 1 ರಿಂದ ನಿಷೇಧಿತ ವಸ್ತುಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿದ್ದು, ಅವರು ಪ್ಲಾಸ್ಟಿಕ್‌ಗೆ ಪರ್ಯಾಯಗಳನ್ನು ಒದಗಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಮಿಶ್ರಗೊಬ್ಬರ ಚೀಲಗಳು ಮತ್ತು ಬಟ್ಟೆ ಚೀಲಗಳ ಪೂರೈಕೆಗೆ ಮಂಡಳಿಯು ಈಗಾಗಲೇ ಅನುಮೋದನೆ ನೀಡಿದೆ. ಈ ಕುರಿತು ಕೆಎಸ್‌ಪಿಸಿಬಿ ಅಧ್ಯಕ್ಷ ಶಾಂತ್ ಅವ್ವೇರಹಳ್ಳಿ ತಿಮ್ಮಯ್ಯ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ನೊಂದಿಗೆ ಮಾತನಾಡಿದ್ದು, 'ನಿಷೇಧ ಆದೇಶವು ಕಟ್ಟುನಿಟ್ಟಾದ ಜಾರಿಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಅಧಿಕಾರವನ್ನು ನೀಡಿದೆ. ಕಟ್ಟುನಿಟ್ಟಿನ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, ಮಂಗಳವಾರ ಮಾರ್ಷಲ್‌ಗಳೊಂದಿಗೆ ಸಭೆ ನಡೆಸಲಾಯಿತು. ಮಾರ್ಷಲ್‌ಗಳಿಗೆ ತರಬೇತಿ ನೀಡಿ ಯಾವ ಕ್ರಮ ಕೈಗೊಳ್ಳಬೇಕು, ಯಾವ ಕಾಯ್ದೆ ಮತ್ತು ಷರತ್ತಿನ ದಂಡವನ್ನು ವಿಧಿಸಬೇಕು ಮತ್ತು ಯಾವ ಕಾಯ್ದೆಯ ಅಡಿಯಲ್ಲಿ ಉತ್ಪಾದನೆ ಮತ್ತು ಚಿಲ್ಲರೆ ಘಟಕಗಳನ್ನು ಮುಚ್ಚಬೇಕು ಎಂದು ತಿಳಿಸಲಾಯಿತು ಎಂದರು.

ಎರಡು ಏಜೆನ್ಸಿಗಳು - ಒಂದು ಮಹಾರಾಷ್ಟ್ರದಿಂದ ಮತ್ತು ಇನ್ನೊಂದು ಅಹಮದಾಬಾದ್‌ನಿಂದ - ಮಿಶ್ರಗೊಬ್ಬರ ಪ್ಲಾಸ್ಟಿಕ್ ಪೂರೈಕೆಗೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು. ಅಂತೆಯೇ ಈ ಏಜೆನ್ಸಿಗಳು ಸಿಪಿಸಿಬಿ ಮತ್ತು ಪ್ಲಾಸ್ಟಿಕ್ ಯುನಿಟ್ ಆಫ್ ಇಂಡಿಯಾದಿಂದ ಅನುಮತಿಯನ್ನು ಪಡೆದಿವೆ. ಈ ವಿಶೇಷ ಬ್ಯಾಗ್‌ಗಳು ಬಾರ್ ಕೋಡ್‌ಗಳೊಂದಿಗೆ ಬರಲಿದ್ದು, ಸ್ಕ್ಯಾನ್ ಮಾಡಿದಾಗ ಉತ್ಪಾದನಾ ಘಟಕ ಮತ್ತು ಪೂರೈಕೆದಾರರ ಸಂಪೂರ್ಣ ವಿವರಗಳನ್ನು ನೀಡುತ್ತದೆ. ಈ ಏಜೆನ್ಸಿಗಳನ್ನು ಕರ್ನಾಟಕದಲ್ಲಿಯೂ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು ಎಂದು ತಿಮ್ಮಯ್ಯ ಹೇಳಿದರು.

2016ರ ನಂತರ ನಿಷೇಧ ಜಾರಿಯಾದ ಬಳಿಕ ಹಲವು ಉತ್ಪಾದನಾ ಘಟಕಗಳ ಮೇಲೆ ದಾಳಿ ನಡೆಸಿ ಮುಚ್ಚಲಾಯಿತು ಎಂದೂ ಅಧ್ಯಕ್ಷರು ತಿಳಿಸಿದರು. ಅದಾಗ್ಯೂ ಪ್ಲಾಸ್ಟಿಕ್ ಬಳಕೆಯಾಗುತ್ತಲೇ ಇದ್ದು, ಇದು ಮಾರಾಟಗಾರರು, ತಿನಿಸುಗಳು, ಹಣ್ಣು ಮತ್ತು ತರಕಾರಿ ಮಾರಾಟಗಾರರು ಮತ್ತು ಅಂಗಡಿಗಳಲ್ಲಿ ಕಂಡುಬರುತ್ತದೆ. ಆದ್ದರಿಂದ ಹಂತಹಂತವಾಗಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಬೇಕು. ಚಿಲ್ಲರೆ ಮಾರಾಟಗಾರರಿಂದ ಮೊದಲ ಬಾರಿ ಉಲ್ಲಂಘನೆಗೆ 2,000 ರೂ., ಎರಡನೇ ಬಾರಿಗೆ 5,000 ರೂ. ಮತ್ತು ಮೂರನೇ ಬಾರಿ ಉಲ್ಲಂಘನೆಗೆ 10,000 ರೂ.ಗಳ ದಂಡವನ್ನು ವಿಧಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಮ್ಮಯ್ಯ ಹೇಳಿದರು.

ಯಾವ ವಸ್ತುಗಳಿಗೆ ನಿಷೇಧ
ಇಯರ್ ಬಡ್‌ಗಳು, ಬಲೂನ್‌ಗಳು, ಕ್ಯಾಂಡಿ, ಐಸ್‌ಕ್ರೀಮ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಕಡ್ಡಿಗಳು, ಕಟ್ಲರಿ ವಸ್ತುಗಳು - ಪ್ಲೇಟ್‌ಗಳು, ಕಪ್‌ಗಳು, ಗ್ಲಾಸ್‌ಗಳು, ಫೋರ್ಕ್ಸ್, ಸ್ಪೂನ್‌ಗಳು, ಚಾಕುಗಳು, ಟ್ರೇಗಳು, ಸ್ಟಿರರ್‌ಗಳು, ಸ್ವೀಟ್ ಬಾಕ್ಸ್, ಇನ್ವಿಟೇಶನ್ ಕಾರ್ಡ್, ಸಿಗರೇಟ್ ಪ್ಯಾಕೆಟ್ ಗಳಿಗೆ ಬಳಸುವ ಪ್ಯಾಕೇಜಿಂಗ್ ವಸ್ತುಗಳು

ಇತರೆ ವಸ್ತುಗಳು- 100 ಮೈಕ್ರಾನ್‌ಗಿಂತ ಕಡಿಮೆ ಇರುವ PVC ಬ್ಯಾನರ್‌ಗಳು, ಅಲಂಕಾರಕ್ಕಾಗಿ ಪಾಲಿಸ್ಟೈರೀನ್, ಕ್ಯಾರಿ ಬ್ಯಾಗ್‌ಗಳು, ಅಲಂಕಾರಕ್ಕಾಗಿ ಥರ್ಮಾಕೋಲ್ ಗಳು, ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT