ಟಿಪ್ಪು ಸುಲ್ತಾನ್(ಸಂಗ್ರಹ) 
ರಾಜ್ಯ

ಮೈಸೂರು ಹುಲಿ ಟಿಪ್ಪು ಪಠ್ಯ ಗೊಂದಲಕ್ಕೆ ಇಂದು ಬ್ರೇಕ್?: ಸದನದಲ್ಲಿ ಉತ್ತರಿಸಲಿದ್ದಾರೆ ಶಿಕ್ಷಣ ಸಚಿವ ಬಿ ಸಿ ನಾಗೇಶ್

ಶಾಲಾ ಪಠ್ಯಪುಸ್ತಕದಲ್ಲಿ ಟಿಪ್ಪು ಪಠ್ಯ ಪರಿಷ್ಕರಣೆ ಕುರಿತ ವಿಚಾರ ದಿನೇದಿನೇ ತಾರಕಕ್ಕೇರುತ್ತಿದೆ. ಈ ಮಧ್ಯೆ ಇಂದು ಸೋಮವಾರ ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿಧಾನಸಭೆಯಲ್ಲಿ ಕಲಾಪ ವೇಳೆ ಈ ಕುರಿತು ಉತ್ತರಿಸಲಿದ್ದು ಟಿಪ್ಪು ಪಠ್ಯ ಪರಿಷ್ಕರಣೆಯೋ, ಅಥವಾ ಟಿಪ್ಪು ಕುರಿತ ವಿಷಯವನ್ನು ಪಠ್ಯದಿಂದ ತೆಗೆದುಹಾಕುವುದೋ ಎಂಬ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ.

ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ಟಿಪ್ಪು ಪಠ್ಯ ಪರಿಷ್ಕರಣೆ ಕುರಿತ ವಿಚಾರ ದಿನೇದಿನೇ ತಾರಕಕ್ಕೇರುತ್ತಿದೆ. ಈ ಮಧ್ಯೆ ಇಂದು ಸೋಮವಾರ ಶಿಕ್ಷಣ ಸಚಿವ ಬಿ ಸಿ ನಾಗೇಶ್ ವಿಧಾನಸಭೆಯಲ್ಲಿ ಕಲಾಪ ವೇಳೆ ಈ ಕುರಿತು ಉತ್ತರಿಸಲಿದ್ದು ಟಿಪ್ಪು ಪಠ್ಯ ಪರಿಷ್ಕರಣೆಯೋ, ಅಥವಾ ಟಿಪ್ಪು ಕುರಿತ ವಿಷಯವನ್ನು ಪಠ್ಯದಿಂದ ತೆಗೆದುಹಾಕುವುದೋ ಎಂಬ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ.

ವಿರೋಧ ಪಕ್ಷಗಳು ಟಿಪ್ಪು ಕುರಿತ ಪಠ್ಯವನ್ನು ತೆಗೆಯುವುದಕ್ಕೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆಯಿದ್ದು ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಏರ್ಪಡುವ ಸಾಧ್ಯತೆಯಿದೆ. ಸರ್ಕಾರದ ನಿಲುವಿಗೆ ಈಗಾಗಲೇ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಟಿಪ್ಪು ಕುರಿತ ಪಠ್ಯದ ಪರಿಷ್ಕರಣೆ ಬಗ್ಗೆ ಮಾಹಿತಿ ನೀಡುವುದಾಗಿ ಸಚಿವ ಬಿ ಸಿ ನಾಗೇಶ್ ಹೇಳಿದ್ದರು. ಈಗಾಗಲೇ ಟಿಪ್ಪು ಪಠ್ಯ ಪರಿಷ್ಕರಣೆಯಾಗಿ ಸರ್ಕಾರದ ಕೈ ಸೇರಿದೆ. ಪಠ್ಯಪುಸ್ತಕ ಸಮಿತಿ ಸದಸ್ಯ ಚಕ್ರತೀರ್ಥರಿಂದ ವರದಿ ತರಿಸಿಕೊಂಡಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ಇಂದು ಸದನದಲ್ಲಿ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಸಚಿವ ಬಿ ಸಿ ನಾಗೇಶ್ ಉತ್ತರಿಸಲಿದ್ದಾರೆ. ಟಿಪ್ಪು ಕುರಿತ ವಿವಾದಕ್ಕೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಬಿ ಸಿ ನಾಗೇಶ್, ಇತಿಹಾಸವನ್ನು ತಿರುಚುವ ಕೆಲಸ ಮಾಡಿದ್ದರೆ ಅದನ್ನು ಸರಿಪಡಿಸುವ ಪ್ರಯತ್ನ ಮಾಡಿದ್ದೇವೆ. ಮಕ್ಕಳು ಓದಬೇಕಾಗಿರುವ ಕೆಲವು ಪಠ್ಯಗಳನ್ನು ತಂದಿದ್ದೇವೆ, ಇದರಲ್ಲಿ ಯಾವುದೇ ರೀತಿಯ ರಾಜಕೀಯವಿಲ್ಲ. ಸಮಿತಿಯಲ್ಲಿಯೂ ರಾಜಕೀಯವಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT