ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ. 
ರಾಜ್ಯ

ಕನ್ನಡ ನಾಡು ಪುಣ್ಯದ ಬೀಡು, ಕರುನಾಡಿನಲ್ಲಿ ಹುಟ್ಟಬೇಕಾದರೆ ಏಳೇಳು ಜನ್ಮದಲ್ಲಿ ಪುಣ್ಯ ಮಾಡಿರಬೇಕು: ಸಿಎಂ ಬೊಮ್ಮಾಯಿ

ಕನ್ನಡ ನಾಡು ಪುಣ್ಯದ ಬೀಡು, ಕರುನಾಡಿನಲ್ಲಿ ಹುಟ್ಟಬೇಕಾದರೆ ಏಳೇಳು ಜನ್ಮದದಲ್ಲಿ ಪುಣ್ಯ ಮಾಡಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಕನ್ನಡ ನಾಡು ಪುಣ್ಯದ ಬೀಡು, ಕರುನಾಡಿನಲ್ಲಿ ಹುಟ್ಟಬೇಕಾದರೆ ಏಳೇಳು ಜನ್ಮದದಲ್ಲಿ ಪುಣ್ಯ ಮಾಡಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಕನ್ನಡ ನಾಡು ಪುಣ್ಯದ ಬೀಡು. ಅತ್ಯಂತ ಸಂಪತ್ದಬರಿತ ನಾಡು ನಮ್ಮ ನಾಡು. ಈ ನಾಡಿನಲ್ಲಿ ಹುಟ್ಟ ಬೇಕಾದರೆ ಏಳೇಳು ಜನ್ಮದ ಪುಣ್ಯ ಮಾಡಿರಬೇಕು. ಕರ್ನಾಟಕದ ಏಕೀಕರಣ ಹೋರಾಟದ ಯಾರೂ ಮರೆಯುವಂತಿಲ್ಲ. ಮದ್ರಾಸ್ ಕರಾವಳಿ ಮಧ್ಯ ಕರ್ನಾಟಕ ಅಂತ ಹಂಚಿ ಹೋಗಿತ್ತು. ಆದರೆ, ಅದನ್ನ ಹಾಲೂರು ವೆಂಕಟರಾಯರು ಹೋರಾಟ ಮಾಡಿ ಕರ್ನಾಟಕ ಏಕೀಕರಣ ಮಾಡಿದರು. ಇದರಲ್ಲಿ ಹಲವಾರು ಮಹನೀಯರ ಶ್ರಮ ಇದೆ. ಇದಕ್ಕೆ ರಾಷ್ಟ್ರ ಕವಿ ಕುವೆಂಪು ಕೂಡಾ ಹಿಂಪನ್ನ ನೀಡಿದ್ದರು. ಶಿಕ್ಷಣ ಆರೋಗ್ಯ, ಉದ್ಯೋಗ ಜೊತೆ ಭಾರತದ ಭವಿಷ್ಯವನ್ನೂ ನಿರ್ಮಾಣ ಮಾಡುವ ಶಕ್ತಿ ಕರ್ನಾಟಕಕ್ಕೆ ಇದೆ ಎಂದು ಹೇಳಿದರು.

ಕನ್ನಡ ಏಕೀಕರಣಗೊಂಡು ಆರೂವರೆ ದಶಕಗಳಿಗೂ ಹೆಚ್ಚು ಸಮಯವಾಗಿದೆ. ಈಗ ಪ್ರತಿಯೊಬ್ಬ ಕನ್ನಡಿಗ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕನ್ನಡ ನಾಡಿಗೆ ನನ್ನ ಕೊಡುಗೆ ಏನು ಅನ್ನೋದು ಅರಿಯಬೇಕು. ಕನ್ನಡ ನಾಡಿನ ಬಗ್ಗೆ ಆಲೋಚನೆ ಮಾಡಿದರೆ ವಿಶ್ವದಲ್ಲೇ ಮೊದಲ ರಾಜ್ಯ ನಮ್ಮದಾಗಲಿದೆ ಎಂದು ತಿಳಿಸಿದರು.

ಶಿಕ್ಷಣ ಸಚಿವ ನಾಗೇಶ್ ಮಾತನಾಡಿ, ಕನ್ನಡನಾಡು ನುಡಿಯ ಬಗ್ಗೆ ಮಕ್ಕಳಿಗೆ ಅಗತ್ಯ ದೇಶಪ್ರೇಮ ಬೆಳೆಸೋದು ಪೋಷಕರ ಕರ್ತವ್ಯ. ಕಲಿಕಾ ಚೇತರಿಕೆ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಟಾನವಾಗಿದೆ. ಪದವಿ ಪೂರ್ವ ಕಾಲೇಜುಗಳ ಕೊಠಡಿಗಳ ಕೊರತೆ ನೀಗಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಸರ್ಕಾರ‌ ಅಗತ್ಯ ಕ್ರಮ ಕೈಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್, ವಿಧಾನ ಪರಿಷತ್ ಸದಸ್ಯರಾದ  ಬಸವರಾಜ ಹೊರಟ್ಟಿ, ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT