ಪ್ರವೀಣ್ ನೆಟ್ಟಾರು-ವಾಂಟೆಡ್ ಪಟ್ಟಿ 
ರಾಜ್ಯ

ನೆಟ್ಟಾರು ಹತ್ಯೆ: ವಾಂಟೆಡ್ ಪಟ್ಟಿ ಬಿಡುಗಡೆ ಮಾಡಿದ ಎನ್‌ಐಎ, ಸುಳಿವು ಕೊಟ್ಟರೆ 5 ಲಕ್ಷ ರೂ. ಬಹುಮಾನ!

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಡಿಕೇರಿಯ ಪಿಎಫ್ ಐ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಾರ್ಯಕರ್ತರು ಬೇಕಾಗಿದ್ದಾರೆ.

ಮಡಿಕೇರಿ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಡಿಕೇರಿಯ ಪಿಎಫ್ ಐ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಾರ್ಯಕರ್ತರು ಬೇಕಾಗಿದ್ದಾರೆ.

ಎನ್‌ಐಎ ಬಿಡುಗಡೆ ಮಾಡಿರುವ ವಾಂಟೆಡ್ ಲಿಸ್ಟ್‌ನಲ್ಲಿ ಆರೋಪಿಗಳ ಹೆಸರುಗಳನ್ನು ಪ್ರಕಟಿಸಲಾಗಿದ್ದು, ಆರೋಪಿಗಳ ಪತ್ತೆಗೆ ನಗದು ಬಹುಮಾನ ಘೋಷಿಸಿದೆ. 

ಮಡಿಕೇರಿ ಮೂಲದ ತುಫೈಲ್ ಎಂಎಚ್ ಪ್ರಮುಖ ವ್ಯಕ್ತಿಯಾಗಿದ್ದು ಇತನ ಮಾಹಿತಿ ನೀಡಿದರೆ ಎನ್ಐಎ ಐದು ಲಕ್ಷ ರೂಪಾಯಿ ಬಹುಮಾನ ನೀಡಲಿದೆ. ಇನ್ನು ಸುಳ್ಯದ ಬೆಳ್ಳಾರೆ ಗ್ರಾಮದ ಮೊಹಮ್ಮದ್ ಮುಸ್ತಫಾ ಎಸ್ ಎಂಬಾತನ ಪತ್ತೆಗೆ ಐದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. 

ಇನ್ನು ಆರೋಪಿಗಳಾದ ಸುಳ್ಯದ ಉಮರ್ ಫಾರೂಕ್ ಎಂಆರ್ ಮತ್ತು ಅಬ್ಬುಬಕ್ಕರ್ ಸಿದ್ದೀಕ್ ಅವರ ಪತ್ತೆಗೆ ತಲಾ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಎಲ್ಲಾ ನಾಲ್ವರು ಆರೋಪಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಸದಸ್ಯರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT