ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಸಮಾರಂಭದಲ್ಲಿ ಭಾಗವಹಿಸಲು ತೆಲುಗು ಸೂಪರ್ ಸ್ಟಾರ್ ಜೂನಿಯರ್ ಎನ್ ಟಿಆರ್ ಅವರು ಮಂಗಳವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಜೂ.ಎನ್ ಟಿಆರ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಚಿವರಾದ ಮುನಿರತ್ನ ಮತ್ತು ಕೆ. ಸುಧಾಕರ್ ಸ್ವಾಗತಿಸಿದರು.
ಇದನ್ನು ಓದಿ: ಪುನೀತ್ ರಾಜಕುಮಾರ್ಗೆ ಕರ್ನಾಟಕ ರತ್ನ: ಮುಖ್ಯ ಅತಿಥಿಯಾಗಲು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು ಎಂದ ರಜನಿಕಾಂತ್
ಜೂ.ಎನ್ ಟಿಆರ್ ಅವರು ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ತೆರಳಿದ್ದು, ಅಲ್ಲಿಂದ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಸಂಜೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಜೂ.ಎನ್ ಟಿಆರ್ ಭಾಗವಹಿಸುತ್ತಿದ್ದಾರೆ.