ಡ್ರೋನ್​ ಪ್ರತಾಪ 
ರಾಜ್ಯ

ಕೈಯಲ್ಲಿ ಸಾಲ್ಡ್ರಿಂಗ್ ಗೇರ್, ಬದಿಯಲ್ಲಿ ಡ್ರೋನ್​ ಕ್ಯಾಮೆರಾ; ಡ್ರೋನ್​ ಪ್ರತಾಪನ ಹೊಸ ಅವತಾರ!

ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್​ ತಯಾರಿಸಿದ್ದೇನೆ ಎಂದು ಹೇಳಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿ ವಿವಾದದ ಬಳಿಕ ನಾಪತ್ತೆಯಾಗಿದ್ದ ಡ್ರೋನ್​ ಪ್ರತಾಪ್ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರು: ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್​ ತಯಾರಿಸಿದ್ದೇನೆ ಎಂದು ಹೇಳಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿ ವಿವಾದದ ಬಳಿಕ ನಾಪತ್ತೆಯಾಗಿದ್ದ ಡ್ರೋನ್​ ಪ್ರತಾಪ್ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

ಹೌದು.. ಪೊಲೀಸರ ವಿಚಾರಣೆಯನ್ನೂ ಎದುರಿಸಿ ಕಣ್ಮರೆಯಾಗಿದ್ದ ಡ್ರೋನ್​ ಪ್ರತಾಪ್​, ಎರಡು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರತ್ಯಕ್ಷರಾಗಿರುವ ಪ್ರತಾಪ್​, ಈ ಬಾರಿ ಹೊಸದಾಗಿ ಏನೋ ಪ್ರಾರಂಭಿಸುತ್ತಿರುವಂತೆ ಮುನ್ಸೂಚನೆ ನೀಡಿದ್ದಾರೆ. ಟೇಬಲ್​ ಮೇಲೊಂದು ಲ್ಯಾಪ್​ಲಾಪ್​ ಇಟ್ಟು, ಅದಕ್ಕೆ ಡಾಟಾ ಕೇಬಲ್​ ಅವಳವಡಿಸಿರುವ ಯಾವುದೋ ಒಂದು ಸಾಧನವನ್ನು ತಮ್ಮ ಮುಂದಿಟ್ಟುಕೊಂಡು, ಎರಡು ಕೈಗಳಿಗೆ ಹಳದಿ ಬಣ್ಣದ ರಕ್ಷಾ ಕವಚ ಹಾಗೂ ಕಣ್ಣಿಗೆ ಸುರಕ್ಷಿತ ಕನ್ನಡಕ ಧರಿಸಿ, ಒಂದು ಕೈಯಲ್ಲಿ ಸಾಲ್ಡರಿಂಗ್ ಗೇರ್​ ಹಿಡಿದು ನಗುತ್ತಾ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. 

ಟೇಬಲ್​ ಮೇಲೆ ಇನ್ನಿತರ ಎಲೆಕ್ಟ್ರಾನಿಕ್​ ಉಪಕರಣಗಳಿದ್ದು, ಟೇಬಲ್​ನ ಒಂದು ಬದಿಯಲ್ಲಿ ಡ್ರೋನ್​ ಕ್ಯಾಮೆರಾದ ಅರ್ಧ ಚಿತ್ರ ಕಾಣುತ್ತದೆ. ಈ ಬಾರಿ ಡ್ರೋನ್​ ಪ್ರತಾಪ್​ ಯಾವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ತಿಳಿಸಿಲ್ಲ. ಆದರೆ, 'ಕೆಟ್ಟ ಜನರು ನಿಮ್ಮ ಜೀವನವನ್ನು ತೊರೆದಾಗ, ಸರಿಯಾದ ವಿಷಯಗಳು ನಿಮ್ಮ ಜೀವನದಲ್ಲಿ ನಡೆಯಲು ಪ್ರಾರಂಭಿಸುತ್ತವೆ' ಎಂಬ ಅಡಿಬರಹ ನೀಡಿದ್ದಾರೆ. 

ಸದ್ಯ ಪ್ರತಾಪ್​ ಅವರ ಹೊಸ ಅವತಾರ ವೈರಲ್​ ಆಗಿದ್ದು, ಫೋಟೋ ನೋಡಿದ ನೆಟ್ಟಿಗರು ಪ್ರತಾಪ್​ ಅವರ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬಗೆಬಗೆಯ ಕಾಮೆಂಟ್​ ಮೂಲಕ ಕಾಲೆಳೆಯುತ್ತಿದ್ದಾರೆ. ಈ ಬಾರಿ ಯಾವ ರಾಕೆಟ್​ ಹಾರಿಸ್ತೀರಾ ಅಣ್ಣಾ ಎಂದು ನೆಟ್ಟಿಗರೊಬ್ಬರು ಕೇಳಿದರೆ, ಇನ್ನೊಬ್ಬ ಅಣ್ಣಾ ಮಿಕ್ಸಿ ರಿಪೇರಿ ಮಾಡುತ್ತಿದ್ದೀರಾ ಎಂದಿದ್ದಾರೆ. ಕಾಗೆ ಪ್ರತಾಪ ಎಂದು ಮಗದೊಬ್ಬ ನೆಟ್ಟಿಗ ವ್ಯಂಗ್ಯವಾಡಿದ್ದಾರೆ. ಅಣ್ಣಾ ನನ್ನ ಇಯರ್​ ಫೋನ್​ನಲ್ಲಿ ಒಂದು ಬದಿ ಕೇಳುತ್ತಿಲ್ಲ, ರಿಪೇರಿ ಮಾಡಿ ಕೊಡು, ಸಾಲ್ಡರಿಂಗ್​ ಮಾಡೋಕೆ ಈ ರೀತಿಯ ಬಿಲ್ಡಪ್​ ಬೇಕಾ?, ಅಣ್ಣನ ಮರು ವಿಶ್ವರೂಪ, ಬ್ರೊ ತುರ್ತಾಗಿ ಶಿವಮೊಗ್ಗದಿಂದ ವಿಜಯಪುರಕ್ಕೆ ಒಂದು ಬ್ಲಡ್​ ಬಾಟಲ್​ ಕಳುಹಿಸಬೇಕಿತ್ತು. 10 ನಿಮಷದಲ್ಲಿ ಕಳುಹಿಸಬೇಕು. ನಿಮ್ಮ ಡ್ರೋಣ್​ ಕಳುಹಿಸಿ, ನಮಗೆ ಸಹಾಯವಾಗುತ್ತೆ ಎಂಬಿತ್ಯಾದಿ ಬಗೆಬಗೆಯ ಕಾಮೆಂಟ್​ಗಳ ಮೂಲಕ ಡ್ರೋನ್​… ಅಲ್ಲ ಅಲ್ಲ ಕಾಗೆ ಪ್ರತಾಪ್​ನನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT