ರೇಣುಕಾಚಾರ್ಯ 
ರಾಜ್ಯ

ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ: ಗೌರಿ ಗದ್ದೆಗೆ ಹೋದವ ವಾಪಸ್ ಬರಲಿಲ್ಲ; ಮನೆಗೆ ಬೇಗ ಬಾ ಮಗನೆ-ಶಾಸಕರ ಕಣ್ಣೀರು

ಬಿಜೆಪಿ ಶಾಸಕ  ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು,  ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ಕಾಣೆಯಾಗಿದ್ದಾರೆ.

ಹೊನ್ನಾಳಿ:  ಬಿಜೆಪಿ ಶಾಸಕ  ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು,  ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ಕಾಣೆಯಾಗಿದ್ದಾರೆ.

ಇದರಿಂದ ಇಡೀ ಕುಟುಂಬಕ್ಕೆ ಆಘಾತವಾಗಿದ್ದು, ಅಣ್ಣನ ಮಗನ ಹುಡುಕಾಟದಲ್ಲಿ ಶಾಸಕ ರೇಣುಕಾಚಾರ್ಯ ಇದ್ದಾರೆ. ಕಳೆದ ಭಾನುವಾರ ಶಿವಮೊಗ್ಗದ ಗೌರಿಗದ್ದೆಗೆ  ಕಾರಿನಲ್ಲಿ ತೆರಳಿದ್ದ ಚಂದ್ರಶೇಖರ್ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದರು.  ನಂತರ ಚಂದ್ರು, ಶಿವಮೊಗ್ಗದಲ್ಲಿ ಸ್ನೇಹಿತರನ್ನು ಮಾತನಾಡಿಸಿ ಸ್ವಲ್ಪ ಕಾಲ ಅವರ ಜೊತೆ ಕಾಲ ಕಳೆದು ಹೊನ್ನಾಳಿಗೆ ಹಿಂದಿರುಗಿದ್ದರು.

ತಮ್ಮ ಸ್ನೇಹಿತ ಕಿರಣ್ ಎಂಬುವರ ಜೊತೆ ತೆರಳಿದ್ದ ಚಂದ್ರು ಶಿವಮೊಗ್ಗದಿಂದ ವಾಪಸ್ ಆಗಿ ನ್ಯಾಮತಿ ವರೆಗೂ ಬಂದಿದ್ದಾರೆ. ಆನಂತರ ನಾಪತ್ತೆಯಾಗಿದ್ದಾರೆ. ಚಂದ್ರು ಪ್ರಯಾಣಿಸುತ್ತಿದ್ದ ಕಾರು ಶಿವಮೊಗ್ಗದ ಮೂಲಕ ಹಾದು ಹೋಗುವ ದೃಶ್ಯಗಳು ಪತ್ತೆಯಾಗಿವೆ, ಭಾನುವಾರ ರಾತ್ರಿ 11.56 ರ ಸುಮಾರಿಗೆ  ಚಂದ್ರಶೇಖರ್ ಮೊಬೈಲ್ ಆನ್ ನಲ್ಲಿತ್ತು, ಆದರೆ ಬೆಳದ್ದೆ 6.48 ಕ್ಕೆ ಸ್ವಿಚ್ ಆಫ್ ಆಗಿದೆ, ಚಂದ್ರಶೇಖರ್ ಪ್ರಯಾಣಿಸುತ್ತಿದ್ದ ಕಾರು ಕೂಡ ನಾಪತ್ತೆಯಾಗಿದ್ದು, ಕಿಡ್ನಾಪ್ ಆಗಿರುವ ಅನುಮಾನ ಮೂಡುತ್ತಿದೆ.

ತಮ್ಮ ಸಹೋದರನ ಪುತ್ರ ನಾಪತ್ತೆಯಾಗಿರುವ ಸಂಬಂಧ ಮಾತನಾಡಿರುವ ರೇಣುಕಾಚಾರ್ಯ, ಮಗನನ್ನು ಹುಡುಕಿಕೊಡುವಂತೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.  

ಮಾಧ್ಯಮಗಳ ಜೊತೆ ಮಾತನಾಡುತ್ತಲೇ ರೇಣುಕಾಚಾರ್ಯ ಕಣ್ಣೀರು ಹಾಕಿದರು. ಪುತ್ರ ಚಂದ್ರಶೇಖರ್ ತುಂಬಾ ಸೌಮ್ಯ ಸ್ವಭಾವದವನು. ಆತನ ಮೊಬೈಲ್​ ಸಹ ಸ್ವಿಚ್ಛ್ ಆಫ್ ಆಗಿದೆ. ಆತನ ಕಾರ್  ಸಹ ಪತ್ತೆಯಾಗಿಲ್ಲ , ನನ್ನ ಅಣ್ಣ ರಮೇಶ್ ನನ್ನು ಸಮಾಧಾನ ಪಡಿಸಲು ಆಗುತ್ತಿಲ್ಲ, ಎಲ್ಲಿದ್ದರೂ ಬೇಗ ಮನೆಗೆ ಬಾ ಮಗನೆ ಎಂದು  ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಚಂದ್ರಶೇಖರ್ ಇಶಾ ಫೌಂಡೇಶನ್ ಮತ್ತು ಗೌರಿಗದ್ದೆ ವಿನಯ್ ಗುರೂಜಿ ಅವರ ಅನುಯಾಯಿಯಾಗಿದ್ದರು.  ಚಂದ್ರ ಶೇಖರ್  ಕ್ಷೇತ್ರದ ಜನರ ಜೊತೆ ಉತ್ತಮ ಒಡನಾಟ ವಿಟ್ಟುಕೊಂಡಿದ್ದರು, ವಿಧಾನಸಭೆ ಚುನಾವಣೆ ಸಮೀಪಸುತ್ತಿರುವ ಸಮಯದಲ್ಲಿ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಎಸ್‌ಪಿ, ಡಿವೈಎಸ್‌ಪಿ ಮಾರ್ಗದಶರ್ನದಲ್ಲಿ ಮೂರು ತಂಡಗಳನ್ನು ರಚಿಸಿ ಹುಡುಕಾಟ ನಡೆಸುತ್ತಿದ್ದೇವೆ. ಲಭ್ಯವಿರುವ ಸಿ.ಸಿ.ಟಿವಿ ಕ್ಯಾಮೆರಾ ದೃಶ್ಯಾವಳಿಗಳು, ಟೋಲ್ ಗೇಟ್‌ಗಳಲ್ಲಿ ಪರಿಶೀಲನೆ ನಡಸಲಾಗುತ್ತಿದೆ’ ಎಂದು ಸಿಪಿಐ ಸಿದ್ದೇಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT