ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ 
ರಾಜ್ಯ

ನಾಪತ್ತೆಯಾಗಿದ್ದ ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ!

ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ಗುರುವಾರ ಪತ್ತೆಯಾಗಿದೆ. 

ದಾವಣಗೆರೆ: ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ಗುರುವಾರ ಪತ್ತೆಯಾಗಿದೆ. 

ದಾವಣಗೆರೆಯ ಕಡದಕಟ್ಟೆ ಗ್ರಾಮದ ಬಳಿಯ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಕಾರನ್ನು ಮೇಲೆತ್ತಿ ಪರಿಶೀಲಿಸಿದಾಗ ಕಾರಿನೊಳಗೆ ಮೃತದೇಹ ಪತ್ತೆಯಾಗಿತ್ತು. ಈ ಮೃತದೇಹ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರದ್ದೇ ಎಂದು ಹೇಳಲಾಗಿದೆ. 

ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.

ಪೊಲೀಸ್ ಮೂಲಗಳ ಪ್ರಕಾರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನ ಹಿಂಬದಿ ಸೀಟ್ ನಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದೆ.

ಚಂದ್ರು ತೆಗೆದುಕೊಂಡು ಹೋಗಿದ್ದ KA 17 MA 2534 ನಂಬರಿನ ವೈಟ್ ಕ್ರೇಟಾ ಕಾರು ಭಾನುವಾರ ಮಧ್ಯರಾತ್ರಿ ಶಿವಮೊಗ್ಗದಿಂದ ಸುರಹೊನ್ನೆ ಬಳಿ ಪಾಸ್ ಆಗಿತ್ತು. ಬಳಿಕ ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿತ್ತು. ಇದೀಗ ಕಾರು ಕಾಲುವೆಯಲ್ಲಿ ಬಿದ್ದಿದೆ. ಕಾರಿನಲ್ಲಿ ಚಂದ್ರಶೇಖರ್ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT