ಮಲ್ಲೇಶ್ವರದಲ್ಲಿ ರಸ್ತೆ ಗುಂಡಿ ಮುಚ್ಚುತ್ತಿರುವ ಸಾರ್ವಜನಿಕರು 
ರಾಜ್ಯ

ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ರಸ್ತೆ ಗುಂಡಿ ಮುಚ್ಚಿದ ಮಲ್ಲೇಶ್ವರದ ನಾಗರಿಕರು

ಬೆಂಗಳೂರಿನ ರಸ್ತೆ ಗುಂಡಿಗಳು ಸಾರ್ವಜನಿಕರಿಗೆ ಮಾರಕವಾಗಿ ಪರಿಣಮಿಸಿದ್ದು, ಹಲವರು ಜೀವ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಕೈ-ಕಾಲು ಮುರಿದುಕೊಂಡಿದ್ದಾರೆ. 

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳು ಸಾರ್ವಜನಿಕರಿಗೆ ಮಾರಕವಾಗಿ ಪರಿಣಮಿಸಿದ್ದು, ಹಲವರು ಜೀವ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಕೈ-ಕಾಲು ಮುರಿದುಕೊಂಡಿದ್ದಾರೆ. 

ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರನ್ನು ಆಕ್ರೋಶಕ್ಕೀಡುಮಾಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಮಲ್ಲೇಶ್ವರದ ಕುಟುಂಬವೊಂದು ತಮಗೆ ಸಮಸ್ಯೆಯಾಗಿದ್ದ ರಸ್ತೆ ಗುಂಡಿಯನ್ನು ಮುಚ್ಚಿ ತಾವೇ ದುರಸ್ತಿಗೊಳಿಸಿದ್ದಾರೆ. 

ಮಲ್ಲೇಶ್ವರದ 18 ನೇ ಅಡ್ಡ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿ ಇರುವ ಗುಂಡಿಯಿಂದಾಗಿ ವ್ಯಕ್ತಿಯೊಬ್ಬರು ಇತ್ತೀಚೆಗಷ್ಟೇ ಪ್ರಾಣಾಪಾಯದಿಂದ ಕೂದಲೆಳೆಯ ಅಂಚಿನಲ್ಲಿ ಬಚಾವಾಗಿದ್ದರು. ತಕ್ಷಣವೇ ಎಚ್ಚೆತ್ತ ಅವರ ಕುಟುಂಬ ಸದಸ್ಯರು ಗುಂಡಿಯನ್ನು ಕಲ್ಲು ಮಣ್ಣಿನಿಂದ ಮುಚ್ಚಿ ದುರಸ್ತಿಗೊಳಿಸಿದ್ದಾರೆ. ಮಲ್ಲೇಶ್ವರದಲ್ಲಿನ ರಸ್ತೆ ಗುಂಡಿಗಳ ಅವ್ಯವಸ್ಥೆಯನ್ನು ಸರಿಮಾಡಲು ಇನ್ನಾದರೂ ಸಾರ್ವಜನಿಕರು ಒತ್ತಾಯ ಮಾಡಬೇಕು ಎಂದು ರಸ್ತೆ ದುರಸ್ತಿಗೊಳಿಸಿದ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ನವೆಂಬರ್ 10 ರೊಳಗೆ ಬೆಂಗಳೂರು ನಗರ ಗುಂಡಿ ಮುಕ್ತವಾಗಲಿದೆ: ಬಿಬಿಎಂಪಿ
 
"ಮಲ್ಲೇಶ್ವರ ಬಸ್ ಸ್ಟ್ಯಾಂಡ್, 18 ನೇ ಕ್ರಾಸ್ ನಲ್ಲಿ ರಸ್ತೆ ಗುಂಡಿಯಿಂದ ನನ್ನ ಪತಿ ಆಕ್ವೀವಾದಲ್ಲಿ ಬರುವಾಗ ಪ್ರಾಣಾಪಾಯದಿಂದ ಕೂದಲೆಳೆಯಲ್ಲಿ ಬಚಾವಾದರು. ಹಾಗಾಗಿ ಆ ಗುಂಡಿಯನ್ನು ಈಗ ಹೋಗಿ ಕಲ್ಲು ಮಣ್ಣಿನಿಂದ ಗುಂಡಿಯನ್ನು ಮುಚ್ಚಿ ಬಂದೆವು. ಮಲ್ಲೇಶ್ವರದ ಅವ್ಯವಸ್ಥೆಯನ್ನು ಇನ್ನಾದರೂ ಸರಿಮಾಡಲು ಸಾರ್ವಜನಿಕರು ಒತ್ತಾಯ ಮಾಡಿ" ಎಂದು ಮಲ್ಲೇಶ್ವರದ ನಿವಾಸಿ ಎಂ.ನಾಗಮಣಿ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!