ನಟ ರಿಷಬ್ ಶೆಟ್ಟಿಗೆ ಕರೆ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 
ರಾಜ್ಯ

'ಕಾಂತಾರ' ಚಿತ್ರ ವೀಕ್ಷಿಸಿ ನಟ ರಿಷಬ್ ಶೆಟ್ಟಿಗೆ ಕರೆ ಮಾಡಿ ಶ್ಲಾಘಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಕಾಂತಾರ ಕನ್ನಡ ಚಿತ್ರ ಭಾಷೆ, ಗಡಿಯನ್ನು ಮೀರಿ ರಾಜ್ಯ, ರಾಷ್ಟ್ರ ಮಾತ್ರವೇಕೆ ವಿದೇಶದಲ್ಲಿಯೂ ಸದ್ದು ಮಾಡುತ್ತಿದೆ. ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದರೂ ಅದರ ಹವಾ ಮಾತ್ರ ಕಡಿಮೆಯಾಗಿಲ್ಲ. ಕೇವಲ ಕಲಾವಿದರು, ಸಾಮಾನ್ಯ ವ್ಯಕ್ತಿಗಳು ಮಾತ್ರವಲ್ಲ ರಾಜಕೀಯ ನಾಯಕರು ಕೂಡ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ಬೆಂಗಳೂರು: ಕಾಂತಾರ ಕನ್ನಡ ಚಿತ್ರ ಭಾಷೆ, ಗಡಿಯನ್ನು ಮೀರಿ ರಾಜ್ಯ, ರಾಷ್ಟ್ರ ಮಾತ್ರವೇಕೆ ವಿದೇಶದಲ್ಲಿಯೂ ಸದ್ದು ಮಾಡುತ್ತಿದೆ. ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದರೂ ಅದರ ಹವಾ ಮಾತ್ರ ಕಡಿಮೆಯಾಗಿಲ್ಲ. ಕೇವಲ ಕಲಾವಿದರು, ಸಾಮಾನ್ಯ ವ್ಯಕ್ತಿಗಳು ಮಾತ್ರವಲ್ಲ ರಾಜಕೀಯ ನಾಯಕರು ಕೂಡ ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಆರಂಭವಾಗಿದ್ದು ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಕಾಂತಾರ ಚಿತ್ರವನ್ನು ಪ್ರಸ್ತಾಪಿಸಿದರು. ಕಾಂತಾರ ಚಿತ್ರ 15-16 ಕೋಟಿ ರೂಪಾಯಿಗಳಲ್ಲಿ ತಯಾರಾದ ಚಿತ್ರ, ಇಂದು 300 ಕೋಟಿಗೂ ಅಧಿಕ ಹಣ ಗಳಿಸಿದೆ. ಹೂಡಿಕೆದಾರರು ಕಾಂತಾರ ಚಿತ್ರವನ್ನು ನೋಡಿ ಕಲಿಯಬೇಕು ಎಂದಿದ್ದರು.

ಅಷ್ಟು ಹೇಳಿದ್ದೇ ತಡ, ಸಮಾರಂಭಕ್ಕೆ ಆಗಮಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಜೆ ವಿರಾಮದ ಸಮಯದಲ್ಲಿ ಬೆಂಗಳೂರಿನಲ್ಲಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ. ಅಷ್ಟೇ ಏಕೆ ನಟ ರಿಷಬ್ ಶೆಟ್ಟಿಗೆ ಕರೆ ಮಾಡಿ ಅವರ ನಟನೆ, ನಿರ್ದೇಶನಕ್ಕೆ ಪ್ರಶಂಸಿಸಿದ್ದಾರೆ.

ಬರಹಗಾರನಾಗಿ, ನಿರ್ದೇಶಕನಾಗಿ, ನಟನಾಗಿ ರಿಷಬ್ ಶೆಟ್ಟಿ ಅದ್ಭುತವಾದ ಚಿತ್ರ ತೆಗೆದಿದ್ದಾರೆ. ತುಳುನಾಡು, ಕರಾವಳಿಯ ಸಂಪದ್ಭರಿತ ಸಂಸ್ಕೃತಿ, ಸಂಪ್ರದಾಯಗಳನ್ನು ಚಿತ್ರ ಸೆರೆಹಿಡಿದಿದೆ ಎಂದು ಸಚಿವೆ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT