ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನದ ಮೊದಲ ರೈಲು 
ರಾಜ್ಯ

ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನ: ಮೊದಲ ರೈಲು ನ.11 ರಂದು ಬೆಂಗಳೂರಿನಿಂದ ಪ್ರಯಾಣ

ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನದ ಮೊದಲ ರೈಲು ಇದೇ ತಿಂಗಳ 11 ರಂದು ಬೆಂಗಳೂರಿನಿಂದ ಹೊರಡಲು ಸಜ್ಜಾಗಿದೆ. ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಮೊದಲು ರೈಲು ಕೇವಲ ಮೂರು ದಿನಗಳಲ್ಲಿ ಸಂಪೂರ್ಣ ಭರ್ತಿ ಆಗಿದೆ.

ಬೆಂಗಳೂರು: ಕರ್ನಾಟಕ- ಭಾರತ್ ಗೌರವ್ ಕಾಶಿ ದರ್ಶನದ ಮೊದಲ ರೈಲು ಇದೇ ತಿಂಗಳ 11 ರಂದು ಬೆಂಗಳೂರಿನಿಂದ ಹೊರಡಲು ಸಜ್ಜಾಗಿದೆ. ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಮೊದಲು ರೈಲು ಕೇವಲ ಮೂರು ದಿನಗಳಲ್ಲಿ ಸಂಪೂರ್ಣ ಭರ್ತಿ ಆಗಿದೆ.

 ಅಕ್ಟೋಬರ್ 30 ರಂದು ಬುಕ್ಕಿಂಗ್ ಪ್ರಾರಂಭಿಸಲಾಗಿತ್ತು. ಮೊದಲ ದಿನವೇ 200 ಬುಕ್ಕಿಂಗ್ ಮಾಡಲಾಗಿತ್ತು. ಮೂರನೇ ದಿನ ಎಲ್ಲಾ 540 ಸೀಟ್ ಗಳು ಭರ್ತಿಯಾಗಿವೆ ಇದೊಂದು ನೂತನ ದಾಖಲೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. 

ಈ ಯಾತ್ರೆಗೆ ಹೊರಡುತ್ತಿರುವ ರೈಲು ನವೆಂಬರ್ 11 ರಂದು ಬೆಂಗಳೂರಿನಿಂದ ಹೊರಡಲಿದ್ದು, ಕಾಶಿ, ಅಯೋಧ್ಯೆ ಮತ್ತು ಪ್ರಯಾಗ್ ರಾಜ್ ಗಳ ಪ್ರವಾಸ ಮುಗಿಸಿ ನವೆಂಬರ್ 18 ರಂದು ವಾಪಸ್ ಬೆಂಗಳೂರಿಗೆ ಬರಲಿದೆ. ಈ ರೈಲು ಬೆಂಗಳೂರು, ಬಿರೂರ್, ಹಾವೇರಿ, ಹುಬ್ಬಳ್ಳಿ. ಬೆಳಗಾವಿ ಹಾಗೂ ರಾಯಭಾಗ ಮಾರ್ಗವಾಗಿ ಕಾಶಿ, ಅಯೋಧ್ಯ ಮತ್ತು ಪ್ರಯಾಗ್ ರಾಜ್ ಗೆ ಸಂಚರಿಸಲಿದೆ. 

ಅತ್ಯಂತ ಕಡಿಮೆ ವೆಚ್ಚದಲ್ಲಿ ಕಾಶಿ ವಿಶ್ವನಾಥ ಹಾಗೂ ಅಯೋಧ್ಯ ರಾಮಲಲ್ಲಾ ದೈವ ಭೂಮಿಯ ವೈಭವ ಸವಿಯಬಹುದಾಗಿದೆ. 8 ದಿನಗಳ ಕಾಲದ ಈ ಟೂರ್ ಪ್ಯಾಕೇಜ್ ನಲ್ಲಿ ಎಲ್ಲಾ ಸವಲತ್ತು ಇರಲಿದೆ. ರೈಲು ದರ, ಪ್ರವಾಸಿ ಸ್ಥಳಗಳಲ್ಲಿ ಅಗತ್ಯವಿರುವ ಬಸ್ ವ್ಯವಸ್ಥೆ, ಉಳಿದುಕೊಳ್ಳಲು ಹೋಟೆಲ್, ಊಟೋಪಚಾರದ ವ್ಯವಸ್ಥೆ ಹಾಗೂ ವಿಮೆ ಸೌಲಭ್ಯ ಕೂಡಾ ಇರಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT