ಚಂದ್ರಶೇಖರ್ 
ರಾಜ್ಯ

ದಾವಣೆಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಂದ್ರಶೇಖರ್ ಮರಣೋತ್ತರ ಪರೀಕ್ಷೆ: ಮಗನ ಸಾವಿನ ಕುರಿತು ರೇಣುಕಾಚಾರ್ಯ ಹೇಳಿದ್ದೇನು?

ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಇಂದು ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ.

ದಾವಣಗೆರೆ: ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಇಂದು ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ. 

ದಾವಣಗೆರೆಯ ಕಡದಕಟ್ಟೆ ಗ್ರಾಮದ ಬಳಿಯ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿತ್ತು. ಕಾರಿನಲ್ಲಿ ಏರ್​ ಬ್ಯಾಗ್ ಓಪನ್ ಆಗಿದ್ದು ಚಂದ್ರಶೇಖರ್ ಶವ ಹಿಂದಿನ ಸೀಟ್​ಲ್ಲಿ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಹಲವು ಅನುಮಾನಗಳನ್ನು ಮೂಡಿಸಿದ್ದು ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ. 

ದಾವಣಗೆರೆ ಜಿಲ್ಲಾಸ್ಪತ್ರೆಗೆ ಚಂದ್ರಶೇಖರ್ ಮೃತದೇಹವನ್ನು ಕೊಂಡೊಯ್ಯಲಾಗಿದೆ. ಜಿಲ್ಲಾ ಸರ್ಜನ್​ ಷಣ್ಮುಖಪ್ಪ ನೇತೃತ್ವದಲ್ಲಿ  ಮರಣೋತ್ತರ ಪರೀಕ್ಷೆ ನಡೆಯಲಿದೆ.

ಚಂದ್ರಶೇಖರ್ ಮೃತದೇಹ ಪತ್ತೆ ಸಂಬಂಧ ಮಾತನಾಡಿರುವ, ರೇಣುಕಾಚಾರ್ಯ, ನನ್ನ ಸಹೋದರನ ಮಗನದ್ದು ವ್ಯವಸ್ಥಿತ ಸಂಚು. ಹೇಡಿಗಳು ಆತನನ್ನು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಬಿಳಿ ಬಟ್ಟೆಯಿಂದ ಆತನ ಕಾಲು ಕಟ್ಟಿ ಹಾಕಿ ಮಚ್ಚಿನಿಂದ ತಲೆ ಹಾಗೂ ಬೆನ್ನಗೆ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಚಂದ್ರು ತೆಗೆದುಕೊಂಡು ಹೋಗಿದ್ದ KA 17 MA 2534 ನಂಬರಿನ ವೈಟ್ ಕ್ರೇಟಾ ಕಾರು ಭಾನುವಾರ ಮಧ್ಯರಾತ್ರಿ ಶಿವಮೊಗ್ಗದಿಂದ ಸುರಹೊನ್ನೆ ಬಳಿ ಪಾಸ್ ಆಗಿತ್ತು. ಬಳಿಕ ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT