ಸಚಿವ ಶ್ರೀರಾಮುಲು 
ರಾಜ್ಯ

ಎಲ್ಎಲ್ ಸಿ ಕಾಲುವೆಯ ದುರಸ್ತಿ ಕಾರ್ಯ ಪೂರ್ಣ: ಸಚಿವ ಶ್ರೀರಾಮುಲು ಘೋಷಣೆ

ಸಚಿವ ಶ್ರೀರಾಮುಲು ಮೊಕ್ಕಾಂ ಹೂಡಿದ್ದ ಬಳ್ಳಾರಿಯ ಬೈರದೇವನಹಳ್ಳಿಯ ಎಲ್ಎಲ್ ಸಿ ಕಾಲುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದೆ ಎಂದು ಹೇಳಲಾಗಿದೆ.

ಬಳ್ಳಾರಿ: ಸಚಿವ ಶ್ರೀರಾಮುಲು ಮೊಕ್ಕಾಂ ಹೂಡಿದ್ದ ಬಳ್ಳಾರಿಯ ಬೈರದೇವನಹಳ್ಳಿಯ ಎಲ್ಎಲ್ ಸಿ ಕಾಲುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ವತಃ ಸಚಿವ ಶ್ರೀರಾಮುಲು ಅವರು ಟ್ವಿಟರ್ ನಲ್ಲಿ ಘೋಷಣೆ ಮಾಡಿದ್ದು, 'ಕೊನೆಗೂ ಬಳ್ಳಾರಿ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಬೈರದೇವನಹಳ್ಳಿ  ಎಲ್ ಎಲ್ ಸಿ ಕಾಲುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಭವಿಷ್ಯದಲ್ಲಿ ಯಾವುದೇ ಅಡ್ಡಿ, ಆತಂಕಗಳು ಎದುರಾಗದಂತೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಕಳೆದ 20 ದಿನಗಳಿಂದ ನೀರು ಹರಿಯದ ಪರಿಣಾಮ ಈ ಭಾಗದ ರೈತರು ಬೆಳೆದಿದ್ದ ಬೆಳೆಗಳು ಒಣಗಿ‌ ಹೋಗುವ ಆತಂಕ ಎದುರಾಗಿತ್ತು.‌ ಅಧಿಕಾರಿಗಳ ಇಚ್ಛಾಶಕ್ತಿ, ಕಾರ್ಮಿಕರ ಸತತ ಪರಿಶ್ರಮದಿಂದ ಕಾಲುವೆಯ ದುರಸ್ತಿ ಕಾರ್ಯವನ್ನು ಮುಗಿಸಿಕೊಟ್ಡಿದ್ದಕ್ಕೆ ಅಭಿನಂದನೆಗಳನ್ನು ಸಲ್ಲಿಸುವೆ. ನೀರು ಹರಿಸಿ ನಿಮ್ಮ ಬೆಳೆಗಳನ್ನು ರಕ್ಷಣೆ ಮಾಡುವುದಾಗಿ  ನಾನು ರೈತರಿಗೆ ವಾಗ್ದಾನ ಮಾಡಿದ್ದೆ. ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದ್ದು ಮುಂದೆಯೂ ಕೂಡ ಈ ಭಾಗದ ರೈತರ ಹಿತಕಾಪಾಡಲು ನಾನು ಸದಾ ಸಿದ್ದನಿದ್ದೇನೆ. ಅಧಿಕಾರ ಇರಲಿ, ಇಲ್ಲದಿರಲಿ, ನಿಮ್ಮ ರಕ್ಷಣೆಗೆ ನಾನು ಬದ್ದನಾಗಿರುವೆ ಎಂದು ಟ್ವೀಟ್ ಮಾಡಿದ್ದಾರೆ.

ಬಿ.ಡಿ.ಹಳ್ಳಿ ವೇದಾವತಿ ನದಿ ಸೇತುವೆ ಕಾಮಗಾರಿ ವಿಳಂಬದ ಬಗ್ಗೆ ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಚಿವ ಶ್ರೀರಾಮುಲು ಭೇಟಿ ನೀಡಿದ್ದರು. ಹದಿನೈದು ದಿನದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕಾಮಗಾರಿ ಕೈಗೆತ್ತಿಕೊಂಡಿರುವ ಸಂಸ್ಥೆಯ ಪ್ರತಿನಿಧಿಗಳು ಶ್ರೀರಾಮುಲು ಅವರಿಗೆ ತಿಳಿಸಿದರು. ಆದರೆ ಕಾಮಗಾರಿ ಮುಗಿಯುವವರೆಗೂ ಸ್ಥಳದಲ್ಲಿಯೇ ಇರುವುದಾಗಿ ಶ್ರೀರಾಮುಲು ತಿಳಿಸಿದ್ದರು. ಬಳಿಕ ಪೂಜೆ ಸಲ್ಲಿಸಿ, ಕಾರ್ಮಿಕರೊಂದಿಗೆ ಊಟ ಮಾಡಿ ಸ್ಥಳದಲ್ಲೇ ಮಲಗಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT