ಕೆ.ಎಸ್. ಭಗವಾನ್ 
ರಾಜ್ಯ

ಶಿವಮೊಗ್ಗ: ಸಾಹಿತಿ ಪ್ರೊ. ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್‌  ಹೊರಡಿಸಿದೆ.

ಸಾಗರ: ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್‌  ಹೊರಡಿಸಿದೆ.

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಕೋರ್ಟ್​ಗೆ ಹಾಜರಾಗದ ಸಾಹಿತಿ ಭಗವಾನ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಮಾಡಿ ಸಾಗರ ಕೋರ್ಟ್ ಆದೇಶ ಮಾಡಿದೆ.  ಈ ಪ್ರಕರಣದ ಕುರಿತು ದೀರ್ಘಕಾಲದ ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿತ್ತು.

ಪ್ರಕರಣದ ವಿಚಾರಣೆಗೆ ಇಂದು ಭಗವಾನ್ ಖುದ್ದು‌ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು‌ ಮೈಸೂರು ಎಸ್​ಪಿ ಅವರ ಮೂಲಕ ಸಮನ್ಸ್ ಜಾರಿ‌ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದರೂ ಸಹ ಇಂದು ಸಾಹಿತಿ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT