ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ 
ರಾಜ್ಯ

ಸಾರ್ವಜನಿಕ ವಾಹನಗಳಲ್ಲಿ ಪತ್ತೆಹಚ್ಚುವಿಕೆ ಸಾಧನಗಳ ಅಳವಡಿಕೆಗೆ ಸಚಿವ ಸಂಪುಟ ಒಪ್ಪಿಗೆ

ಬಸ್ಸು, ಟ್ಯಾಕ್ಸಿ ಮತ್ತು ಆಟೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವಾಹನ ಇರುವ ಸ್ಥಳ ಪತ್ತೆ ಸಾಧನಗಳು ಮತ್ತು ತುರ್ತು ಪ್ಯಾನಿಕ್ ಬಟನ್‌ಗಳನ್ನು (vehicle location tracking devices and emergency panic buttons) ಅಳವಡಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬೆಂಗಳೂರು: ಬಸ್ಸು, ಟ್ಯಾಕ್ಸಿ ಮತ್ತು ಆಟೋ ಸೇರಿದಂತೆ ಎಲ್ಲಾ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ವಾಹನ ಇರುವ ಸ್ಥಳ ಪತ್ತೆ ಸಾಧನಗಳು ಮತ್ತು ತುರ್ತು ಪ್ಯಾನಿಕ್ ಬಟನ್‌ಗಳನ್ನು (vehicle location tracking devices and emergency panic buttons) ಅಳವಡಿಸಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರದ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು. ಯೋಜನೆಗೆ 20.36 ಕೋಟಿ ರೂಪಾಯಿ ಮಂಜೂರಾಗಿದ್ದು, ಶೇಕಡಾ 60ರಷ್ಟು ಕೇಂದ್ರ ಸರ್ಕಾರ ಹಾಗೂ ಉಳಿದ ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದರು.

ಈ ಕ್ರಮವು ಪ್ರಾಥಮಿಕವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ಗುರಿಯನ್ನು ಹೊಂದಿದೆ. ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗವನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ, ಜೊತೆಗೆ ಪಾರ್ಕಿಂಗ್ ಮೇಲೆ ಗಮನ ಇರಿಸುತ್ತದೆ. ಕೇಂದ್ರೀಯ ಯಾಂತ್ರೀಕೃತ ವ್ಯವಸ್ಥೆಯ ಮೂಲಕ, ಅಧಿಕಾರಿಗಳು ವಾಹನಗಳು ಸರಿಯಾದ ಮಾರ್ಗದಲ್ಲಿ ಚಲಿಸುತ್ತಿವೆಯೇ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ. ಅನಧಿಕೃತ ವಾಹನಗಳ ಮೇಲೆ ನಿಗಾ ಇಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. 

4.51 ಲಕ್ಷ ಕ್ಯಾಬ್‌ಗಳು ಮತ್ತು ಟ್ಯಾಕ್ಸಿಗಳು, 16,432 ಶಾಲಾ ಬಸ್‌ಗಳು, 23,077 ಖಾಸಗಿ ಸಾರಿಗೆ ವಾಹನಗಳು, 24,701 ಕೆಎಸ್‌ಆರ್‌ಟಿಸಿ ಬಸ್‌ಗಳು, 5,138 ಗುತ್ತಿಗೆ ವಾಹನಗಳು, 1,900 ಪ್ರವಾಸಿ ಬಸ್‌ಗಳು ಮತ್ತು 85,949 ಸರಕು ವಾಹನಗಳು ಸೇರಿದಂತೆ 6.08 ಲಕ್ಷಕ್ಕೂ ಹೆಚ್ಚು ವಾಹನಗಳಲ್ಲಿ ಈ ಸಾಧನಗಳನ್ನು ಅಳವಡಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT