ಹಂಪಿಯಲ್ಲಿ ಮಣ್ಣು ಸಂಗ್ರಹಿಸಿದ ಸಚಿವರಾದ ಆರ್. ಅಶೋಕ, ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತಿತರರು 
ರಾಜ್ಯ

ಕೆಂಪೇಗೌಡ ಪ್ರತಿಮೆ ಅನಾವರಣ: ಹಂಪಿಯ ದೇವಸ್ಥಾನದಲ್ಲಿ ಮಣ್ಣು ಸಂಗ್ರಹ

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆ ಸಾಕಾರವಾಗಲು ವಿಜಯ ನಗರ ಸಾಮ್ರಾಜ್ಯದ ಕೊಡುಗೆ ಅಪಾರವಾಗಿದೆ. ಪ್ರಗತಿ ಪ್ರತಿಮೆಅನಾವರಣದ ಪ್ರಯುಕ್ತ ಈ ನೆಲದ ಪವಿತ್ರ ಮೃತ್ತಿಕೆ ಸಂಗ್ರಹಿಸುವ ಸೌಭಾಗ್ಯ ನಮಗೆ ದೊರೆಯಿತು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು.

ಹಂಪಿ: ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಶುಕ್ರವಾರ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ರೂ ಆದ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್ ಅಶೋಕ ಸೇರಿದಂತೆ ನಾಲ್ವರು ಸಚಿವರು ಹಂಪಿಗೆ ಬಂದು ಇಲ್ಲಿನ ಪವಿತ್ರ ಮಣ್ಣು ಕೊಂಡೊಯ್ದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಯುವಜನ ಕ್ರೀಡಾ ಸಚಿವ ನಾರಾಯಣಗೌಡ, ಸಂಸದ ವೈ.ದೇವೇಂದ್ರಪ್ಪ ಉಪಸ್ಥಿತರಿದ್ದರು. 

ಹಂಪಿ ವಿರೂಪಾಕ್ಷೇಶ್ವರ, ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದ ಸಚಿವರು, ಬಳಿಕ ಮಣ್ಣು ಸಂಗ್ರಹಿಸಿದರು. ನಾಡಪ್ರಭು ಕೆಂಪೇಗೌಡ, ಶ್ರೀ ಕೃಷ್ಣದೇವರಾಯನ ಹೆಸರಲ್ಲಿ ಅರ್ಚನೆ ಮಾಡಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ ಯೋಜನೆ ಸಾಕಾರವಾಗಲು ವಿಜಯ ನಗರ ಸಾಮ್ರಾಜ್ಯದ ಕೊಡುಗೆ ಅಪಾರವಾಗಿದೆ. ಪ್ರಗತಿ ಪ್ರತಿಮೆಅನಾವರಣದ ಪ್ರಯುಕ್ತ ಈ ನೆಲದ ಪವಿತ್ರ ಮೃತ್ತಿಕೆ ಸಂಗ್ರಹಿಸುವ ಸೌಭಾಗ್ಯ ನಮಗೆ ದೊರೆಯಿತು ಎಂದು ತಿಳಿಸಿದರು. 

ಇದಕ್ಕೂ ಮುನ್ನ ಸಚಿವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬಿಜೆಪಿ ಮುಖಂಡರು ಸ್ವಾಗತಿಸಿದರು. ಅಲ್ಲಿಂದ ಹಂಪಿ ವರೆಗೆ ಬೈಕ್ ಜಾಥಾ ನಡೆಸಿದರು. ಅಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಸಚಿವರು ವಿರೂಪಾಕ್ಷ ದೇಗುಲದ ವರೆಗೆ‌ ಹೆಜ್ಜೆ ಹಾಕಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT