ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 9.7 ಲಕ್ಷ ರೂ. ನಗದು ವಶಕ್ಕೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ 21 ಕಚೇರಿಗಳಲ್ಲಿ ಏಕಕಾಲಕ್ಕೆ ಹಠಾತ್ ತಪಾಸಣೆ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 14 ಉಪ ನೋಂದಣಿ ಕಚೇರಿಗಳಲ್ಲಿ ಲೆಕ್ಕವಿಲ್ಲದ 9,72,294 ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ 21 ಕಚೇರಿಗಳಲ್ಲಿ ಏಕಕಾಲಕ್ಕೆ ಹಠಾತ್ ತಪಾಸಣೆ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 14 ಉಪ ನೋಂದಣಿ ಕಚೇರಿಗಳಲ್ಲಿ ಲೆಕ್ಕವಿಲ್ಲದ 9,72,294 ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

ದಿಢೀರ್ ಭೇಟಿ ವೇಳೆ ಉಪ ನೋಂದಾವಣಿ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಕಡತ, ನೋಂದಣಿಯಾಗಿರುವ ದಾಖಲೆಗಳು, ನೋಂದಣಿಗೆ ಬಾಕಿ ಇದ್ದ ದಾಖಲೆಗಳು, ವಿತರಣೆಯಾದ ದಾಖಲೆಗಳ ವಿವರ, ಚಲನ್‌ಗಳು, ನಗದು ಘೋಷಣಾ ರಿಜಿಸ್ಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

‘ಈ ಎಲ್ಲ ಕಚೇರಿಗಳಲ್ಲೂ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಕಡತ, ನೋಂದಣಿಯಾಗಿರುವ ದಾಖಲೆಗಳು, ನೋಂದಣಿಗೆ ಬಾಕಿ ಇದ್ದ ದಾಖಲೆಗಳು, ವಿತರಣೆಯಾದ ದಾಖಲೆಗಳ ವಿವರ, ಚಲನ್‌ಗಳು, ನಗದು ಘೋಷಣಾ ರಿಜಿಸ್ಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮಧ್ಯವರ್ತಿಗಳನ್ನು ಮತ್ತಷ್ಟು ವಿಚಾರಣೆ ನಡೆಸಿದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯ 14, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಐದು ಮತ್ತು ರಾಮನಗರ ಜಿಲ್ಲೆಯ ರಾಮನಗರ ಹಾಗೂ ಕನಕಪುರ ಉಪ ನೋಂದಣಿ ಕಚೇರಿಗಳ ಮೇಲೆ ಗುರುವಾರ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು, ತಡರಾತ್ರಿವರೆಗೂ ಶೋಧ ನಡೆಸಿದ್ದರು.

ವರ್ತೂರು ಉಪ ನೋಂದಣಿ ಕಚೇರಿಯಲ್ಲಿ ರೂ.3.17 ಲಕ್ಷ, ಬನಶಂಕರಿ ಕಚೇರಿಯಲ್ಲಿ ರೂ.1.18 ಲಕ್ಷ, ಹೊಸಕೋಟೆ ಕಚೇರಿಯಲ್ಲಿ ರೂ.1.04 ಲಕ್ಷ, ಆನೇಕಲ್ ಕಚೇರಿಯಲ್ಲಿ ರೂ. 95,630, ಬೇಗೂರು ಕಚೇರಿಯಲ್ಲಿ ರೂ.93,406, ಕೆಂಗೇರಿಯಲ್ಲಿ ರೂ.42,000 ನಗದು ಮಧ್ಯವರ್ತಿಗಳ ಬಳಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಬಿ.ಎಸ್‌. ಪಾಟೀಲ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!