ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 9.7 ಲಕ್ಷ ರೂ. ನಗದು ವಶಕ್ಕೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ 21 ಕಚೇರಿಗಳಲ್ಲಿ ಏಕಕಾಲಕ್ಕೆ ಹಠಾತ್ ತಪಾಸಣೆ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 14 ಉಪ ನೋಂದಣಿ ಕಚೇರಿಗಳಲ್ಲಿ ಲೆಕ್ಕವಿಲ್ಲದ 9,72,294 ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ 21 ಕಚೇರಿಗಳಲ್ಲಿ ಏಕಕಾಲಕ್ಕೆ ಹಠಾತ್ ತಪಾಸಣೆ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 14 ಉಪ ನೋಂದಣಿ ಕಚೇರಿಗಳಲ್ಲಿ ಲೆಕ್ಕವಿಲ್ಲದ 9,72,294 ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

ದಿಢೀರ್ ಭೇಟಿ ವೇಳೆ ಉಪ ನೋಂದಾವಣಿ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಕಡತ, ನೋಂದಣಿಯಾಗಿರುವ ದಾಖಲೆಗಳು, ನೋಂದಣಿಗೆ ಬಾಕಿ ಇದ್ದ ದಾಖಲೆಗಳು, ವಿತರಣೆಯಾದ ದಾಖಲೆಗಳ ವಿವರ, ಚಲನ್‌ಗಳು, ನಗದು ಘೋಷಣಾ ರಿಜಿಸ್ಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

‘ಈ ಎಲ್ಲ ಕಚೇರಿಗಳಲ್ಲೂ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಕಡತ, ನೋಂದಣಿಯಾಗಿರುವ ದಾಖಲೆಗಳು, ನೋಂದಣಿಗೆ ಬಾಕಿ ಇದ್ದ ದಾಖಲೆಗಳು, ವಿತರಣೆಯಾದ ದಾಖಲೆಗಳ ವಿವರ, ಚಲನ್‌ಗಳು, ನಗದು ಘೋಷಣಾ ರಿಜಿಸ್ಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮಧ್ಯವರ್ತಿಗಳನ್ನು ಮತ್ತಷ್ಟು ವಿಚಾರಣೆ ನಡೆಸಿದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯ 14, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಐದು ಮತ್ತು ರಾಮನಗರ ಜಿಲ್ಲೆಯ ರಾಮನಗರ ಹಾಗೂ ಕನಕಪುರ ಉಪ ನೋಂದಣಿ ಕಚೇರಿಗಳ ಮೇಲೆ ಗುರುವಾರ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು, ತಡರಾತ್ರಿವರೆಗೂ ಶೋಧ ನಡೆಸಿದ್ದರು.

ವರ್ತೂರು ಉಪ ನೋಂದಣಿ ಕಚೇರಿಯಲ್ಲಿ ರೂ.3.17 ಲಕ್ಷ, ಬನಶಂಕರಿ ಕಚೇರಿಯಲ್ಲಿ ರೂ.1.18 ಲಕ್ಷ, ಹೊಸಕೋಟೆ ಕಚೇರಿಯಲ್ಲಿ ರೂ.1.04 ಲಕ್ಷ, ಆನೇಕಲ್ ಕಚೇರಿಯಲ್ಲಿ ರೂ. 95,630, ಬೇಗೂರು ಕಚೇರಿಯಲ್ಲಿ ರೂ.93,406, ಕೆಂಗೇರಿಯಲ್ಲಿ ರೂ.42,000 ನಗದು ಮಧ್ಯವರ್ತಿಗಳ ಬಳಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಬಿ.ಎಸ್‌. ಪಾಟೀಲ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT