ಸತೀಶ್ ಜಾರಕಿಹೊಳಿ 
ರಾಜ್ಯ

‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ.. ಅರ್ಥ ಬಹಳ ಅಶ್ಲೀಲ: ಸತೀಶ್ ಜಾರಕಿಹೊಳಿ

‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಚಿಕ್ಕೋಡಿ: ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್‌ ಎನ್ನುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಭಾರತಕ್ಕೂ, ಪರ್ಷಿಯನ್‍ಗೂ ಏನ್ ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ನಾಯಕರು ಶಿವಾಜಿ ಬಗ್ಗೆ ಮಾತನಾಡುತ್ತಾರೆ. ಆದರೆ ಮಹಾತ್ಮಾ ಜ್ಯೋತಿಬಾ ಫುಲೆ ಇಲ್ಲದಿದ್ದರೇ ಛತ್ರಪತಿ ಶಿವಾಜಿ ಅವರ ಇತಿಹಾಸ ಹೊರಗೆ ಬರುತ್ತಿರಲಿಲ್ಲ. ಅವರ ಇತಿಹಾಸವನ್ನು ಮುಚ್ಚಿಡಲಾಗಿತ್ತು. ಸತ್ಯ ಶೋಧಕ ಸಂಸ್ಥೆಯಿಂದ ಅವರ ಇತಿಹಾಸ ಹೊರಗೆ ಬಂದಿದೆ. ಶಿವಾಜಿ ಎಲ್ಲರನ್ನು ಸಮಾನತೆಯಿಂದ ನೋಡುತ್ತಿದ್ದರು. ವಿಶ್ವದಲ್ಲಿ ಶಿವಾಜಿ ಅವರ ಒಂದೇ ಪೇಂಟಿಂಗ್‌ ಇರುವುದು ಅದನ್ನು ಯಾರೋ ಕುಲಕರ್ಣಿ, ದೇಶಪಾಂಡೆ ಅವರು ತಯಾರಿಸಿಲ್ಲ. ಮೊಹಮ್ಮದ್‌ ಮದಾರಿ ಎನ್ನುವ ಚಿತ್ರಕಾರ ಆ ಪೇಂಟಿಂಗ್‌ ತಯಾರಿಸಿದ್ದರು ಎಂದು ತಿಳಿಸಿದ್ದಾರೆ. 

ಪ್ರತಾಪಗಡ್ ಕೋಟೆಯಲ್ಲಿ ಶಿವಾಜಿ ಮಸೀದಿ ನಿರ್ಮಾಣ ಮಾಡಿರುವ ಇತಿಹಾಸವಿದೆ. ಅವರ ಕಾಲದಲ್ಲಿ ಸಮಾನತೆಯಿತ್ತು. ಆದರೆ ಈಗ ಮರಾಠಾ, ಮುಸ್ಲಿಂ, ದಲಿತರ ನಡುವೆ ದಿನನಿತ್ಯ ಜಗಳವಾಗುತ್ತಿವೆ. ಇತಿಹಾಸ ಬೇರೆ ಇದೆ. ನಮಗೆ ಬೇರೆ ಇತಿಹಾಸ ತೋರಿಸಲಾಗುತ್ತಿದೆ. ಬಸವಣ್ಣ, ಶಿವಾಜಿ, ಸಂತ ತುಕಾರಾಮ ಸೇರಿದಂತೆ ಮಹಾನ್ ಪುರುಷರ ಇತಿಹಾಸವನ್ನು ತಿರುಚಿ ತೋರಿಸಲಾಗುತ್ತಿದೆ. ಬಸವಣ್ಣವರ ಕಾಲದಲ್ಲಿ ಸಾಕಷ್ಟು ಹತ್ಯೆಗಳು ನಡೆದವು. ಅದನ್ನು ಮುಸ್ಲಿಮರು ಮಾಡಿದ್ರಾ? ಒಂದು ಲಕ್ಷ ಜೈನರ ಹತ್ಯೆಗಳಾಗಿವೆ ಎಂದು ಜೈನ್ ಸ್ವಾಮೀಜಿ ಹೇಳಿದ್ದಾರೆ. ಜೈನರ ಹತ್ಯೆಯನ್ನು ಆದೀಲ್ ಶಾ ಮಾಡಿದ್ರಾ? ಈ ಎಲ್ಲದರ ಕುರಿತು ಚರ್ಚೆ ಆಗಬೇಕಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT