ಸಂಗ್ರಹ ಚಿತ್ರ 
ರಾಜ್ಯ

ಆಸ್ಪತ್ರೆಯಿಂದ ಆಸ್ಪತ್ರೆ ಸುತ್ತಿದರೂ ನೋವಿಗೆ ಸಿಗದ ಪರಿಹಾರ: ಕಾಲು ತುಂಡರಿಸಿಕೊಂಡಿದ್ದ ಯುವಕ ಸಾವು!

ಕಾಲು ನೋವಿಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಡಿದರೂ ಎಲ್ಲಿಯೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಕಾಲನ್ನೇ ತುಂಡರಿಸಿಕೊಂಡಿದ್ದ ಬೆಳಗಾವಿ ಮೂಲದ ಯುವಕ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾನೆ.

ಬೆಳಗಾವಿ: ಕಾಲು ನೋವಿಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಾಡಿದರೂ ಎಲ್ಲಿಯೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಕಾಲನ್ನೇ ತುಂಡರಿಸಿಕೊಂಡಿದ್ದ ಬೆಳಗಾವಿ ಮೂಲದ ಯುವಕ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾನೆ.

ಮೃತ ಯುವಕನನ್ನು ರಾಜು ಫಕೀರಪ್ಪ ಯರಗುದ್ದಿ (24) ಎಂದು ಗುರ್ತಿಸಲಾಗಿದೆ. ಹಲವು ದಿನಗಳಿಂದ ರಾಜು ಅವರು ಕಾಲು ನೋವಿನಿಂದ ಬಳಲುತ್ತಿದ್ದರು. ಹಲವು ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆದುಕೊಂಡರೂ ಪರಿಹಾರ ಸಿಕ್ಕಿರಲಿಲ್ಲ. ಇದರಿಂದ ನೊಂದ ರಾಜು ಅವರು, ಶಾಶ್ವತ ಪರಿಹಾರ ಸಿಗಬಹುದು ಎಂದು ಭಾವಿಸಿ ನ.3 ರಂದು ಮನೆಯಲ್ಲಿ ಒಬ್ಬರೇ ಇದ್ದಾಗ ಕುಡುಗೋಲಿನಿಂದ ನೋವಿದ್ದ ಕಾಲನ್ನು ತುಂಡರಿಸಿದ್ದರು.

ಕಾಲು ಕತ್ತರಿಸಿಕೊಂಡ ಕೂಡಲೇ ರಾಜು ಕಿರುಚಾಡಿದ್ದಾರೆ. ಇದನ್ನು ಕೇಳಿದ ಸುತ್ತಮುತ್ತಲಿನ ಜನರು ಮನೆಯೊಳಗೆ ಓಡಿ ಬಂದು ನೋಡಿ ತುಂಡರಿಸಿದ್ದ ಕಾಲಿನ ಜೊತೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾಜು ಶನಿವಾರ ಕೊನೆಯುಸಿರೆಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT