ಶಿವಮೂರ್ತಿ ಮುರುಘಾ ಶರಣರು 
ರಾಜ್ಯ

ಮುರುಘಾ ಶ್ರೀ ಪ್ರಕರಣ: ಮಠದ ಕಾರ್ಯವೈಖರಿ ಕುರಿತು ಮಾಹಿತಿ ಸಂಗ್ರಹಿಸಿದ ಜಿಲ್ಲಾಧಿಕಾರಿ

ಮುರುಘಾ ಮಠದ ಆಡಳಿತ, ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿ ಕುರಿತು ರಾಜ್ಯ ಸರ್ಕಾರ ಕೋರಿರುವ ಅಗತ್ಯ ಮಾಹಿತಿ ಸಂಗ್ರಹಿಸಿರುವುದಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಜಿಆರ್‌ಜೆ ಅವರು ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ: ಮುರುಘಾ ಮಠದ ಆಡಳಿತ, ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿ ಕುರಿತು ರಾಜ್ಯ ಸರ್ಕಾರ ಕೋರಿರುವ ಅಗತ್ಯ ಮಾಹಿತಿ ಸಂಗ್ರಹಿಸಿರುವುದಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಜಿಆರ್‌ಜೆ ಅವರು ಮಾಹಿತಿ ನೀಡಿದ್ದಾರೆ.

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ​ ಹಿನ್ನೆಲೆ ಏಕಾಂತಯ್ಯ ನೇತೃತ್ವದ ನಿಯೋಗ ಪೀಠತ್ಯಾಗಕ್ಕೆ ಆಗ್ರಹಿಸಿದೆ. ಈ ಬಗ್ಗೆ ಮುಖ್ಯಮಂತ್ರಿಯವರನ್ನು ಭೇಟಿಯಾದ ನಿಯೋಗವು ಸರ್ಕಾರವು ಮಧ್ಯಪ್ರವೇಶಿಸಿ ಮುರುಘಾ ಶ್ರೀಗಳನ್ನು ಪೀಠಾಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಮತ್ತು ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವಂತೆ ಒತ್ತಾಯಿಸಿತ್ತು.

ಇನ್ನೊಂದೆಡೆ ಮಠದ ಎಸ್​ಜೆಎಂ ವಿದ್ಯಾಸಂಸ್ಥೆಗಳ ಸಿಬ್ಬಂದಿಗೆ ವೇತನ ವಿಳಂಬದ ಬಗ್ಗೆಯೂ ದೂರು ನೀಡಲಾಗಿತ್ತು. ಈ ಎಲ್ಲವನ್ನು ಗಮನಿಸಿದ ಸರ್ಕಾರ ಮಠ ಹಾಗೂ ವಿದ್ಯಾಸಂಸ್ಥೆ ಕಾರ್ಯವೈಖರಿ ಬಗ್ಗೆ ವರದಿ ಕೇಳಿತ್ತು.

ಸರ್ಕಾರದ ಸೂಚನೆಯಂತೆ ನಿನ್ನೆ (ನ.6) ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು ಮಠಕ್ಕೆ ಭೇಟಿ ನೀಡಿ ಮಠ ಹಾಗೂ ವಿದ್ಯಾಪೀಠದ ಆಡಳಿತ ಕಾರ್ಯ ವೈಖರಿ ಪರಿಶೀಲನೆ ನಡೆಸಿದರು.

ಎಸ್‌ಜೆಎಂ ವಿದ್ಯಾಪೀಠದ ಆಡಳಿತಾತ್ಮಕ ವಿಷಯಗಳು ಮತ್ತು ಚಿನ್ಮೂಲದ್ರಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಟ್ರಸ್ಟ್‌ನ ಬಗ್ಗೆ ವರದಿ ಸಿದ್ಧಪಡಿಸುವಂತೆ ಕಂದಾಯ ಇಲಾಖೆ ಸೂಚಿಸಿತ್ತು. ಇದರಂತೆ ವರದಿ ಸಿದ್ಧಪಡಿಸಲಾಗಿದೆ. ಚಂದ್ರವಳ್ಳಿಯಲ್ಲಿರುವ ಎಸ್‌ಜೆಎಂ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವೇತನ ವಿತರಣೆ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಈ ಬಗ್ಗೆ ಕಂದಾಯ ಇಲಾಖೆಗೆ ವರದಿ ಸಲ್ಲಿಸಲಾಗುತ್ತದೆ ಎಂದು ದಿವ್ಯಾ ಪ್ರಭು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT