ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಳ್ತಂಗಡಿ: ದಲಿತ ಕಾರ್ಯಕರ್ತ ಪಿ. ಡೀಕಯ್ಯ ಸಾವಿನ ಬಗ್ಗೆ ಸಿಒಡಿ ತನಿಖೆಗೆ ಸರ್ಕಾರ ಆದೇಶ

ದಲಿತ ಹೋರಾಟಗಾರ ಪಿ. ಡೀಕಯ್ಯ ಅವರ ಸಾವಿನ ಕುರಿತು ಕರ್ನಾಟಕ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಂಗಳೂರು: ದಲಿತ ಹೋರಾಟಗಾರ ಪಿ. ಡೀಕಯ್ಯ ಅವರ ಸಾವಿನ ಕುರಿತು ಕರ್ನಾಟಕ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜುಲೈ 6 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಅವರ ಮನೆಯಲ್ಲಿ ತಲೆಗೆ ಗಾಯಗಳೊಂದಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಡೀಕಯ್ಯ ಪತ್ತೆಯಾಗಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ.

ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಜು. 8 ರಂದು ಮೃತಪಟ್ಟಿದ್ದರು.

ಅವರ ಅಂಗಾಂಗಗಳನ್ನು ದಾನ ಮಾಡಿದ ನಂತರ ಮೃತದೇಹವನ್ನು ಅವರ ಹುಟ್ಟೂರಾದ ಕಾಣಿಯೂರಿನಲ್ಲಿ ಸಮಾಧಿ ಮಾಡಲಾಯಿತು. ನಂತರ ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ಸಾವಿನ ಹಿಂದೆ ದುಷ್ಕೃತ್ಯವಿದೆ ಎಂದು ಶಂಕಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜು.18ರಂದು ಬೆಳ್ತಂಗಡಿ ತಹಶೀಲ್ದಾರ್ ಸಮ್ಮುಖದಲ್ಲಿ ಶವವನ್ನು ಹೊರತೆಗೆಯಲಾಯಿತು.

ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಡೀಕಯ್ಯನ ಕುಟುಂಬ ಸದಸ್ಯರು ಸಿಐಡಿ ತನಿಖೆಗೆ ಒತ್ತಾಯಿಸಿದ್ದರು.

ರಾಜ್ಯ ಸರ್ಕಾರವು ನವೆಂಬರ್ 4 ರಂದು ತನ್ನ ಆದೇಶದಲ್ಲಿ ಪ್ರಕರಣದ ಕಡತವನ್ನು ಸಿಐಡಿಗೆ ಹಸ್ತಾಂತರಿಸುವಂತೆ ಬೆಳ್ತಂಗಡಿ ಪೊಲೀಸರನ್ನು ಕೇಳಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

ತುಮಕೂರು ಕ್ರೀಡಾಂಗಣದಿಂದ ಗಾಂಧಿ ಹೆಸರು ತೆರವು- ಬಿಜೆಪಿ ಆರೋಪ; ಜಿ ಪರಮೇಶ್ವರ ಪ್ರತಿಕ್ರಿಯೆ ಏನು? Video

SCROLL FOR NEXT