ಸಂಗ್ರಹ ಚಿತ್ರ 
ರಾಜ್ಯ

ಬೀಜ ನಿಗಮದಲ್ಲಿನ 'ಗುತ್ತಿಗೆ ಕಾರ್ಮಿಕರ ನೇಮಕಾತಿ' ಅಕ್ರಮ ತನಿಖೆ ಮಾಡಿ: ಸಿಎಜಿಗೆ ಹೈಕೋರ್ಟ್ ಆದೇಶ

ಕೃಷಿ ಇಲಾಖೆ ಅಧೀನದಲ್ಲಿರುವ 'ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ' (ಕೆಎಸ್‌ಎಸ್‌ಸಿಎಲ್‌) ಗುತ್ತಿಗೆ ಕಾರ್ಮಿಕರನ್ನು ಹೇಗೆ ನೇಮಕ ಮಾಡಿಕೊಳ್ಳುತ್ತಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ನಿಯಂತ್ರಣಾಧಿಕಾರಿ ಮತ್ತು ಮಹಾ ಲೆಕ್ಕ ಪರಿಶೋಧಕರಿಗೆ (ಸಿಎಜಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

ಬೆಂಗಳೂರು: ಕೃಷಿ ಇಲಾಖೆ ಅಧೀನದಲ್ಲಿರುವ 'ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ' (ಕೆಎಸ್‌ಎಸ್‌ಸಿಎಲ್‌) ಗುತ್ತಿಗೆ ಕಾರ್ಮಿಕರನ್ನು ಹೇಗೆ ನೇಮಕ ಮಾಡಿಕೊಳ್ಳುತ್ತಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ನಿಯಂತ್ರಣಾಧಿಕಾರಿ ಮತ್ತು ಮಹಾ ಲೆಕ್ಕ ಪರಿಶೋಧಕರಿಗೆ (ಸಿಎಜಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

2007ರಿಂದ 2015ರ ನಡುವೆ ಗುತ್ತಿಗೆ ಆಧಾರದ ಮೇಲೆ ನಿಗಮದಲ್ಲಿ ಕೆಲಸ ಮಾಡಿರುವ ಸಿ.ಸುಜಾತಾ ಸಲ್ಲಿಸಿದ್ದ ಒಂದು ಅರ್ಜಿ ಹಾಗೂ ನಿಗಮ ಸಲ್ಲಿಸಿದ್ದ ಇನ್ನೊಂದು ಅರ್ಜಿ ಸೇರಿ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಒಪ್ಪಂದದ ಮೇಲಿನ ಉದ್ಯೋಗದ ವಿಧಾನವು ನಿಜವಾದ ಮತ್ತು ಪ್ರಾಮಾಣಿಕ ವ್ಯವಹಾರವೇ ಅಥವಾ ನಿಗಮವು ಅಳವಡಿಸಿಕೊಂಡ ಕಾಟಾಚಾರದ ವಿಧಾನವೇ ಎಂಬುದನ್ನು ಸಹ ಸಿಎಜಿ ಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ನಿಗಮವು ಅಳವಡಿಸಿಕೊಂಡ ವಿಧಾನಗಳು ಭಾರತದ ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಲಾದ ಕಲ್ಯಾಣ ರಾಜ್ಯದ ತತ್ವಗಳಿಗೆ ವಿರುದ್ಧವಾಗಿದೆಯೇ ಎಂದು ಕಂಡುಹಿಡಿಯಲು ಸಿಎಜಿಯನ್ನು ಸೂಚಿಸಿರುವ ನ್ಯಾಯಾಲಯವು 2023ರ ಅಕ್ಟೋಬರ್ 15 ರೊಳಗೆ ವರದಿ ನೀಡುವಂತೆ ಸಿಎಜಿ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT