ಸಂಗ್ರಹ ಚಿತ್ರ 
ರಾಜ್ಯ

ಬೀಜ ನಿಗಮದಲ್ಲಿನ 'ಗುತ್ತಿಗೆ ಕಾರ್ಮಿಕರ ನೇಮಕಾತಿ' ಅಕ್ರಮ ತನಿಖೆ ಮಾಡಿ: ಸಿಎಜಿಗೆ ಹೈಕೋರ್ಟ್ ಆದೇಶ

ಕೃಷಿ ಇಲಾಖೆ ಅಧೀನದಲ್ಲಿರುವ 'ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ' (ಕೆಎಸ್‌ಎಸ್‌ಸಿಎಲ್‌) ಗುತ್ತಿಗೆ ಕಾರ್ಮಿಕರನ್ನು ಹೇಗೆ ನೇಮಕ ಮಾಡಿಕೊಳ್ಳುತ್ತಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ನಿಯಂತ್ರಣಾಧಿಕಾರಿ ಮತ್ತು ಮಹಾ ಲೆಕ್ಕ ಪರಿಶೋಧಕರಿಗೆ (ಸಿಎಜಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

ಬೆಂಗಳೂರು: ಕೃಷಿ ಇಲಾಖೆ ಅಧೀನದಲ್ಲಿರುವ 'ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ' (ಕೆಎಸ್‌ಎಸ್‌ಸಿಎಲ್‌) ಗುತ್ತಿಗೆ ಕಾರ್ಮಿಕರನ್ನು ಹೇಗೆ ನೇಮಕ ಮಾಡಿಕೊಳ್ಳುತ್ತಿದೆ ಎಂಬುದರ ಕುರಿತು ತನಿಖೆ ನಡೆಸುವಂತೆ ನಿಯಂತ್ರಣಾಧಿಕಾರಿ ಮತ್ತು ಮಹಾ ಲೆಕ್ಕ ಪರಿಶೋಧಕರಿಗೆ (ಸಿಎಜಿ) ಹೈಕೋರ್ಟ್‌ ನಿರ್ದೇಶನ ನೀಡಿದೆ.

2007ರಿಂದ 2015ರ ನಡುವೆ ಗುತ್ತಿಗೆ ಆಧಾರದ ಮೇಲೆ ನಿಗಮದಲ್ಲಿ ಕೆಲಸ ಮಾಡಿರುವ ಸಿ.ಸುಜಾತಾ ಸಲ್ಲಿಸಿದ್ದ ಒಂದು ಅರ್ಜಿ ಹಾಗೂ ನಿಗಮ ಸಲ್ಲಿಸಿದ್ದ ಇನ್ನೊಂದು ಅರ್ಜಿ ಸೇರಿ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಒಪ್ಪಂದದ ಮೇಲಿನ ಉದ್ಯೋಗದ ವಿಧಾನವು ನಿಜವಾದ ಮತ್ತು ಪ್ರಾಮಾಣಿಕ ವ್ಯವಹಾರವೇ ಅಥವಾ ನಿಗಮವು ಅಳವಡಿಸಿಕೊಂಡ ಕಾಟಾಚಾರದ ವಿಧಾನವೇ ಎಂಬುದನ್ನು ಸಹ ಸಿಎಜಿ ಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ನಿಗಮವು ಅಳವಡಿಸಿಕೊಂಡ ವಿಧಾನಗಳು ಭಾರತದ ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಲಾದ ಕಲ್ಯಾಣ ರಾಜ್ಯದ ತತ್ವಗಳಿಗೆ ವಿರುದ್ಧವಾಗಿದೆಯೇ ಎಂದು ಕಂಡುಹಿಡಿಯಲು ಸಿಎಜಿಯನ್ನು ಸೂಚಿಸಿರುವ ನ್ಯಾಯಾಲಯವು 2023ರ ಅಕ್ಟೋಬರ್ 15 ರೊಳಗೆ ವರದಿ ನೀಡುವಂತೆ ಸಿಎಜಿ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT