ಕುಟುಂಬ ಸದಸ್ಯರೊಂದಿಗೆ ಗಂಗಾಧರ ತಳವಾರ್ 
ರಾಜ್ಯ

ಮನೆ ತೊರೆದಿದ್ದ ಮದ್ಯ ವ್ಯಸನಿ ಆಧಾರ್ ಕಾರ್ಡ್ ಗಾಗಿ 24 ವರ್ಷಗಳ ಬಳಿಕ ಕುಟುಂಬಕ್ಕೆ ವಾಪಸ್!

ಮದ್ಯಸೇವನೆ ತ್ಯಜಿಸುವಂತೆ ಮಾವ ಬುದ್ಧಿವಾದ ಹೇಳಿದ್ದಕ್ಕೆ ಕುಡಿತ ಬಿಡುವ ಬದಲು ಮನೆಬಿಟ್ಟು ಹೋಗಿದ್ದ ವ್ಯಕ್ತಿಯೋರ್ವ ಆಧಾರ್ ಕಾರ್ಡ್ ನ ಅಗತ್ಯಕ್ಕಾಗಿ 24 ವರ್ಷಗಳ ಬಳಿಕ ಮನೆಗೆ ವಾಪಸ್ಸಾಗಿರುವ ವಿಲಕ್ಷಣ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ: ಮದ್ಯಸೇವನೆ ತ್ಯಜಿಸುವಂತೆ ಮಾವ ಬುದ್ಧಿವಾದ ಹೇಳಿದ್ದಕ್ಕೆ ಕುಡಿತ ಬಿಡುವ ಬದಲು ಮನೆಬಿಟ್ಟು ಹೋಗಿದ್ದ ವ್ಯಕ್ತಿಯೋರ್ವ ಆಧಾರ್ ಕಾರ್ಡ್ ನ ಅಗತ್ಯಕ್ಕಾಗಿ 24 ವರ್ಷಗಳ ಬಳಿಕ ಮನೆಗೆ ವಾಪಸ್ಸಾಗಿರುವ ವಿಲಕ್ಷಣ ಘಟನೆ ಕೊಪ್ಪಳದಲ್ಲಿ ನಡೆದಿದೆ.
 
ಗಂಗಾಧರಪ್ಪ ತಳವಾರ್ (51) 25 ವರ್ಷಗಳ ಹಿಂದೆ ಮನೆಬಿಟ್ಟು ಹೋಗಿದ್ದ ವ್ಯಕ್ತಿಯಾಗಿದ್ದು, ಆತನಿಗಾಗಿ ಹಲವು ವರ್ಷಗಳ ಕಾಲ ಕಾದಿದ್ದ ಕುಟುಂಬ ಸದಸ್ಯರು ಆತ ಮೃತಪಟ್ಟಿರಬಹುದು ಎಂದು ಭಾವಿಸಿ ಹಾಲ್ ನಲ್ಲಿ ಆತನ ಫೋಟೋಗೆ ಹೂವಿನ ಹಾರ ಹಾಕಿದ್ದರು. 

ಆದರೆ ಕಳೆದ ವಾರ ಫೋಟೋ ಫ್ರೇಮ್ ನಲ್ಲಿದ್ದ ಅದೇ ವ್ಯಕ್ತಿ ಮರಳಿ ಕಾಣಿಸಿಕೊಂಡಿದ್ದು, ಕುಟುಂಬ ಸದಸ್ಯರಿಗೆ ಅಘಾತ ಹಾಗೂ ಅಚ್ಚರಿ ಎರಡೂ ಉಂಟಾಗಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸಣ್ಣ ಗ್ರಾಮದವರಾಗಿರುವ ಗಂಗಾಧರ ತಳವಾರ್, ಕೋಪದಲ್ಲಿ ಮನೆಬಿಟ್ಟು ಹೋದ ಬಳಿಕ ಜೀವನೋಪಾಯಕ್ಕಾಗಿ ಏನು ಮಾಡಬೇಕೆಂದು ತೋಚಲಿಲ್ಲ. ಮಂಗಳೂರಿಗೆ ತೆರಳಿದ ಅವರು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು, ಇದಾದ ಕೆಲ ದಿನಗಳ ಬಳಿಕ ಮಂಗಳೂರಿನ ಜಮೀನಿನಲ್ಲಿ ಉದ್ಯೋಗ ಮಾಡುತ್ತಿದ್ದರು. ಕೆಲವು ತಿಂಗಳ ಹಿಂದೆ ಜಮೀನಿನ ಮಾಲಿಕ ತಳವಾರ್ ಗೆ ಇಷ್ಟು ವರ್ಷ ದುಡಿದು ಉಳಿಸಿದ್ದ ಆತನ ವೇತನವನ್ನು ನೀಡಲು ನಿರ್ಧರಿಸಿದರು.

ನನಗೆ ಒಂದಷ್ಟು ಆರೋಗ್ಯದ ಸಮಸ್ಯೆಗಳು ಪ್ರಾರಂಭವಾಯಿತು, ಆಗ ನನ್ನ ಕುಟುಂಬ ಸದಸ್ಯರ ಅನುಪಸ್ಥಿತಿ ಕಾಡುತ್ತಿತ್ತು, ನಾನು ದುಡಿದಿದ್ದ ಹಣದಲ್ಲಿ 2 ಲಕ್ಷ ರೂಪಾಯಿಗಳನ್ನು ನೀಡಲು ಜಮೀನಿನ ಮಾಲಿಕರು ಮುಂದಾದರು ಅದಕ್ಕಾಗಿ ಬ್ಯಾಂಕ್ ಖಾತೆ ತೆರೆಯಬೇಕಾಯಿತು, ಬ್ಯಾಂಕ್ ಖಾತೆ ತೆರೆಯಲು ಆಧಾರ್ ಅಗತ್ಯವಿತ್ತು, ಅಧಾರ್ ಗಾಗಿ ನಾನು ಮತ್ತೆ ನನ್ನ ಗ್ರಾಮಕ್ಕೆ ಬರುವಂತಾಗಿ ಮನೆಗೆ ಮರಳಿದ್ದು ಸಂತೋಷವಾಗುತ್ತಿದೆ ಎಂದು ತಳವಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT