ರೈಲು ನಿಲ್ದಾಣದ ಬಳಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವುದು. 
ರಾಜ್ಯ

ನವೆಂಬರ್ 11ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: 'ಎಕ್ಸ್'ಪ್ರೆಸ್ ಮೋಡ್'ನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಬಿಬಿಎಂಪಿ ಮುಂದು!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ನ.11 ರಂದು ನಗರಕ್ಕೆ ಬೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ 'ಎಕ್ಸ್'ಪ್ರೆಸ್ ಮೋಡ್'ನಲ್ಲಿ ಕಾಮಗಾರಿಗಳ ಪೂರ್ಣಗೊಳಿಸಲು ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ನ.11 ರಂದು ನಗರಕ್ಕೆ ಬೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ 'ಎಕ್ಸ್'ಪ್ರೆಸ್ ಮೋಡ್'ನಲ್ಲಿ ಕಾಮಗಾರಿಗಳ ಪೂರ್ಣಗೊಳಿಸಲು ಬಿಬಿಎಂಪಿ ಮುಂದಾಗಿದೆ.

ಮೆಜೆಸ್ಟಿಕ್‌ನಲ್ಲಿ 8.7 ಕೋಟಿ ರೂಪಾಯಿ ವೆಚ್ಚದ ವೈಟ್‌ಟಾಪಿಂಗ್ ಕಾಮಗಾರಿಯನ್ನು ಬಿಬಿಎಂಪಿ ವೇಗ ನಡೆಸುತ್ತಿದೆ.

ಈ ಕುರಿತು ಬಿಬಿಎಂಪಿ ಇಂಜಿನಿಯರ್ ಗಳು ಮಾತನಾಡಿ, ಮಾರ್ಗದ ಒಂದು ಬದಿಯ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಕಾಂಕ್ರಿಟೀಕರಣದ ಮೊದಲು ಮಿಲ್ಲಿಂಗ್ ಕೆಲಸ ಮಾಡಲು ಅನುಮತಿ ನೀಡುವಂತೆ ಪಶ್ಚಿಮ ಡಿಸಿಪಿ ಮತ್ತು ಬೆಂಗಳೂರು ಸಂಚಾರ ಇಲಾಖೆಗೆ ಮನವಿ ಮಾಡಲಾಗಿತ್ತು, ಆದರೆ ವಿವಿಐಪಿ ಈ ರಸ್ತೆಗಳನ್ನು ಉಪಯೋಗಿಸುವುದರಿಂದ ಮೋದಿ ಭೇಟಿ ವೇಳೆ ಸಂಚಾರ ದಟ್ಟಣೆ ಎದುರಾಗಿ, ಸಮಸ್ಯೆಗಳು ಎದುರಾಗುವುದರಿಂದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆಂದು ಹೇಳಿದ್ದಾರೆ.

“ಪ್ರಧಾನಿ ಓಕಳಿಪುರಂ ರಸ್ತೆಯಿಂದ ಬಂದು ಹಿಂದಿನ ಗೇಟ್ ಮೂಲಕ ವಂದೇ ಭಾರತ್ ಎಕ್ಸ್'ಪ್ರೆಸ್ ರೈಲಿಗೆ ಚಾಲನೆ ನೀಡಲು ಪ್ಲಾಟ್‌ಫಾರ್ಮ್ ನಂ.7ಕ್ಕೆ ತಲುಪಲಿದ್ದಾರೆ. ಹೀಗಾಗಿ ಬಿಬಿಎಂಪಿ ಗುಬ್ಬಿ ತೋಟದಪ್ಪ ರಸ್ತೆ ಮತ್ತು ನಿಲ್ದಾಣದ ಎದುರಿನ ರಸ್ತೆಯನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತಿದೆ. ಈ ರಸ್ತೆಯಲ್ಲಿ ಗುಂಡಿಗಳು ಹೆಚ್ಚುತ್ತಲೇ ಇರುವುದರಿಂದ ಕಾಮಗಾರಿ ಬೇಗ ಮುಗಿಯುವಂತೆ ಪಾಲಿಕೆ ಕಾರ್ಮಿಕರನ್ನು ನಿಯೋಜಿಸಿದೆ’ ಎಂದು ಬಿಬಿಎಂಪಿ ಎಂಜಿನಿಯರ್'ಗಳು ಮಾಹಿತಿ ನೀಡಿದ್ದಾರೆ.

"ಇನ್ನೂ ಎರಡು ದಿನಗಳ ಕಾಲ ಮಿಲ್ಲಿಂಗ್ ಕೆಲಸ ನಡೆಯಲಿದ್ದು, ಪ್ರಧಾನಿ ಮೋದಿ ಹಿಂತಿರುಗಿದ ಬಳಿಕ ಪಾಲಿಕೆಯು ಉಳಿದ ಭಾಗಕ್ಕೆ ಕಾಂಕ್ರೀಟ್ ಹಾಕಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ರಸ್ತೆ ಅಗೆಯುವ ವೇಳೆ ಜಲಮಂಡಳಿಯು ಪಾಲಿಕೆಗೆ ಪಾವತಿಸುತ್ತದೆ. ಆದರೆ, ಕೆಲಸ ಮುಗಿದ ಮೇಲೆ ಅದನ್ನು ಸರಿಪಡಿಸುವುದಿಲ್ಲ. ರಸ್ತೆ ಅಗೆದ ಬಳಿಕ ಬಿಡಬ್ಲ್ಯೂಎಸ್ಎಸ್'ಬಿ ರಸ್ತೆ ಸರಿಪಡಿಸುವ ಕೆಲಸ ಮಾಡಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT