ಮಂಗಳವಾರ ಶಿರಹಟ್ಟಿಯ ಫಕೀರೇಶ್ವರ ಮಠದಲ್ಲಿ ಫಕೀರ ಸಿದ್ದರಾಮೇಶ್ವರ ಸ್ವಾಮಿಯ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ. 
ರಾಜ್ಯ

ದೇಶ ವಿಭಜನೆಗೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ

ಭಾರತ್‌ ಜೋಡೋ ಯಾತ್ರೆ ಕುರಿತು ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವಾಗ್ದಾಳಿ ನಡೆಸಿದರು.

ಶಿರಹಟ್ಟಿ (ಗದಗ): ಭಾರತ್‌ ಜೋಡೋ ಯಾತ್ರೆ ಕುರಿತು ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವಾಗ್ದಾಳಿ ನಡೆಸಿದರು.

 ಬಿಜೆಪಿಯ ಜನಸಂಕಲ್ಪ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ ಅವರು “ದೇಶವನ್ನು ಎರಡು ಭಾಗಗಳಾಗಿ ವಿಭಜಿಸಿದ ಪಕ್ಷ (ಕಾಂಗ್ರೆಸ್) ... ಪಂಜಾಬ್ ಅನ್ನು ಖಲಿಸ್ತಾನ್ ಮಾಡಲು ಪ್ರಯತ್ನಿಸಿದ ಪಕ್ಷವು ಈಗ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿದೆ ಎಂದು ಹೇಳಿದರು.

ದೇಶ ಕಟ್ಟಿದೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಆದರೆ, ತನ್ನ 60 ವರ್ಷಗಳ ಆಡಳಿತದಲ್ಲಿ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ವಿದ್ಯುತ್ ನೀಡಲಿಲ್ಲ. ಈ ಎಲ್ಲಾ ಮೂಲಭೂತ ಅಗತ್ಯಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಲು ದೇಶವು ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದನ್ನು ಕಾಯುತ್ತಿದೆ ಎಂದು ತಿಳಿಸಿದ್ದಾರೆ.

ಒಡೆದು ಆಳುವುದು ಕಾಂಗ್ರೆಸ್ ನೀತಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ವಿಭಜಿಸಿ ಆಡಳಿತ ನಡೆಸಿದೆ . ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದೆ ಮತ್ತು ಅದರ ನಾಯಕರು ವಕ್ಫ್ ಆಸ್ತಿಯನ್ನು ಲೂಟಿ ಮಾಡಿದ್ದಾರೆ. ಈ ಬಗ್ಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ವರದಿ ನೀಡಲಾಗಿದೆ ಎಂದರು.

ಕಾಂಗ್ರೆಸ್ ನಾಯಕರು ತಮ್ಮ ಸ್ವಾರ್ಥಕ್ಕಾಗಿ ಅಧಿಕಾರವನ್ನು ಬಳಸುತ್ತಿದ್ದಾರೆ ಮತ್ತು 2023 ರಲ್ಲಿ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆಂದು ಹೇಳಿದರು.

ಸಂಕಲ್ಪ ಯಾತ್ರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಬಿ ಸಿ ಪಾಟೀಲ್, ಮತ್ತು ಬಿ ಶ್ರೀರಾಮುಲು, ಸಂಸದ ಶಿವಕುಮಾರ್ ಉದಾಸಿ ಮತ್ತು ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ಇದು ದೇಶಕ್ಕೆ ಮಾಡಿದ ಅವಮಾನ, ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

Census 2027: 40 ಪ್ರಶ್ನೆಗಳು ಪ್ರಕಟ, ಉದ್ದೇಶವೇ ಶಂಕಾಸ್ಪದ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!

ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಗರಿ: ದೇಶೀಯವಾಗಿ ಫೈಟರ್ ಜೆಟ್ ಎಂಜಿನ್ ನಿರ್ಮಿಸಲಿವೆ ರಿಲಯನ್ಸ್-ರೋಲ್ಸ್ ರಾಯ್ಸ್!

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು ʻA’ ಸರ್ಟಿಫಿಕೇಟ್; ರನ್‌ಟೈಮ್‌ ಕೇಳಿದ್ರೆ ಥ್ರಿಲ್‌ ಆಗ್ತೀರಾ!