ಸಿಎಂ ಬೊಮ್ಮಾಯಿ 
ರಾಜ್ಯ

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಕುರಿತು ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ

ಮುರುಘಾ ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಕುರಿತು ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿರುವ ವರದಿ ಆಧರಿಸಿ ರಾಜ್ಯ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.

ಹೊಸದುರ್ಗ (ಚಿತ್ರದುರ್ಗ): ಮುರುಘಾ ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಕುರಿತು ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿರುವ ವರದಿ ಆಧರಿಸಿ ರಾಜ್ಯ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಕೋರಿರುವ ಅರ್ಜಿ ಸರಕಾರಕ್ಕೆ ತಲುಪಿದೆ. ನಿರ್ಧಾರ ತೆಗೆದುಕೊಳ್ಳುವ ಮೊದಲು ಸರ್ಕಾರ ಅನುಸರಿಸಬೇಕಾದ ಕಾರ್ಯವಿಧಾನವಿರುವುದರಿಂದ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇವೆಂದು ಹೇಳಿದರು.

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿಬಂದಿರುವ ಆರೋಪಗಳು ನ್ಯಾಯಾಲಯದ ಮುಂದಿದೆ. ಪ್ರಕರಣ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಸಂದರ್ಭದಲ್ಲಿ ಈ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ತಿಳಿಸಿದರು.

ಇದೇ ವೇಳೆ ಹಿಂದೂ ಪದ ಕುರಿತು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸತೀಶ್ ಜಾರಕಿಹೊಳಿ ಅವರಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಬಿಜೆಪಿಯ ಜನಸಂಕಲ್ಪ ಯಾತ್ರೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ವಿಧಾನಸಭಾ ಚುನಾವಣೆಗೆ ಮುನ್ನ ಯಾತ್ರೆ ವಿಜಯ ಸಂಕಲ್ಪವಾಗಿ ಬದಲಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT