ಪ್ರಮೋದ್ ಮುತಾಲಿಕ್ 
ರಾಜ್ಯ

ಇಸ್ಲಾಂ, ಕ್ರಿಶ್ಚಿಯನ್ ಬಗ್ಗೆ ಮಾತನಾಡಿದ್ದರೆ ಇಷ್ಟೊತ್ತಿಗೆ ಗೋರಿಯಲ್ಲಿ ಇರ್ತಿದ್ರು: ಸತೀಶ್ ಜಾರಕಿಹೊಳಿ ವಿರುದ್ಧ ಮುತಾಲಿಕ್ ಕಿಡಿ

ಹಿಂದೂ' ಎನ್ನುವ ಪದ ಪರ್ಷಿಯನ್ ಮೂಲದ್ದು. ಈ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ದಾವಣಗೆರೆ: 'ಹಿಂದೂ' ಎನ್ನುವ ಪದ ಪರ್ಷಿಯನ್ ಮೂಲದ್ದು. ಈ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಶಾಸಕ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿಗೆ ಧಮ್ ಇದ್ದರೆ ಕುರಾನ್, ಬೈಬಲ್ ಕುರಿತು ಮಾತನಾಡಲಿ. ‌ಕ್ರಿಶ್ಚಿಯನ್ ಅಥವಾ ಇಸ್ಲಾಂ ಬಗ್ಗೆ ಮಾತನಾಡಿದ್ದರೆ ಇಷ್ಟೊತ್ತಿಗೆ ಗೋರಿಯಲ್ಲಿ ಇರುತ್ತಿದ್ದರು ಎಂದು ಹೇಳಿದ್ದಾರೆ.

ಹಿಂದೂಗಳಿಗೆ ತಾಳ್ಮೆ ಜಾಸ್ತಿಯಿದೆ, ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡಬೇಡಿ. ಬಹಿರಂಗವಾಗಿ ಇಂತಹ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ನೀಡಬಾರದು ಎಚ್ಚರಿಸಿದ್ದಾರೆ.

ಸ್ಮಶಾನದಲ್ಲಿ ಪೂಜೆ, ಮದುವೆ ಮಾಡುತ್ತಾರೆ. ಅವರಿಗೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಹಕ್ಕಿಲ್ಲ. ಹಿಂದೂ ಎಂಬ ಶಬ್ಧ ಬಹಳ ಹಳೆಯದು. ಇದಕ್ಕೆ 2,400 ವರ್ಷಗಳ ಇತಿಹಾಸವಿದೆ. ಕೂಡಲೇ ಸತೀಶ್ ಜಾರಕಿಹೋಳಿ ಹಿಂದೂಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮಾಜಿ ಶಾಸಕ ಬಿ ಟಿ ಲಲಿತಾ ನಾಯಕ್ ವಿರುದ್ಧ ಗರಂ ಆದ ಮುತಾಲಿಕ್, ದೈವಿಕ ನರ್ತಕರಿಗೆ 2 ಸಾವಿರ ರೂ ಮಾಶಾಸನ ನೀಡುವುದು ತಪ್ಪು ಎಂಬ ಹೇಳಿಕೆಯನ್ನು ಖಂಡಿಸಿದರು.

ಮಸೀದಿಯಲ್ಲಿ ಆಜಾನ್ ಕೂಗುವ ಮುಸ್ಲಿಮರಿಗೂ ಸರ್ಕಾರ ಮಾಶಾಸನ ನೀಡುತ್ತಿದೆ. ತಾಕತ್ತಿದ್ದರೆ ಅದರ ಬಗ್ಗೆಯೂ ಮಾತನಾಡಿ. ಅದನ್ನು ಹೊರತುಪಡಿಸಿ ಹಿಂದೂಗಳ ಬಗ್ಗೆ ಮಾತನಾಡೋದಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT