ಆರೋಪಿ ಓಂಕಾರಗೌಡ 
ರಾಜ್ಯ

ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ: ಹೆತ್ತ ಮಗಳನ್ನು ಕಾಲುವೆಗೆ ತಳ್ಳಿ ನಂತರ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ತಂದೆ!

ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಮರ್ಯಾದಾ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ನಡೆದಿದೆ.

ಬಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಮರ್ಯಾದಾ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ನಡೆದಿದೆ. 

ಕುಡುತಿನಿ ಪಟ್ಟಣದ ಬುಡ್ಗ ಜಂಗಮ ಕಾಲೋನಿಯಲ್ಲಿ ವಾಸವಾಗಿದ್ದ ಓಂಕಾರಗೌಡ ತಮ್ಮ ಪುತ್ರಿಯನ್ನು ಹೆಚ್ಎಲ್ ಸಿ ಕಾಲುವೆಗೆ ತಲ್ಲಿ ಕೊಲೆ ಮಾಡಿದ್ದಾರೆ. ಹೈಸ್ಕೂಲ್ ನಲ್ಲಿ ಓಂಕಾರಗೌಡನ ಮಗಳು ವ್ಯಾಸಾಂಗ ಮಾಡುತ್ತಿದ್ದಳು. ಇನ್ನು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ತಿಳಿದ ಮೇಲೆ ಯುವಕನಿಂದ ದೂರವಿರುವಂತೆ ಓಂಕಾರಗೌಡ ಎಚ್ಚರಿಕೆ ನೀಡಿದ್ದರು. 

ಇದನ್ನು ದಿಕ್ಕರಿಸಿ ಯುವಕನ ಜೊತೆ ಪ್ರೀತಿಯ ಒಡನಾಟ ಮುಂದುವರಿಸಿದ್ದಾಳೆ ಎಂದು ಓಂಕಾರಗೌಡ ಮಗಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದನು. ಅದರಂತೆ ಮಗಳನ್ನು ಅಕ್ಟೋಬರ್ 31ರಂದು ಮಧ್ಯಾಹ್ನ ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಡು ಹೋಗಿದ್ದಾನೆ. ಅಷ್ಟರಲ್ಲಾಗಲೇ ಸಿನಿಮಾ ಆರಂಭವಾಗಿದ್ದರಿಂದ ಪಟ್ಟಣದಲ್ಲಿ ಸುತ್ತಾಡಿದ್ದನು.

ರಾತ್ರಿಯಾದ ನಂತರ ಮಗಳನ್ನು ಕರೆದುಕೊಂಡು ಎಚ್ಎಲ್ ಸಿ ಕಾಲುವೆ ಬಳಿ ಬಂದಿದ್ದಾನೆ. ಇಲ್ಲೇ ಇರು ಬರುತ್ತೀನಿ ಎಂದು ಹೇಳಿ ಹೋದ ಓಂಕಾರಗೌಡ ನಂತರ ಹಿಂದಿನಿಂದ ಬಂದು ಮಗಳನ್ನು ಕಾಲುವೆಗೆ ತಳ್ಳಿದ್ದಾನೆ. ನೀರಿನ ರಭಸಕ್ಕೆ ಮಗಳು ಕೊಚ್ಚಿಹೋಗಿದ್ದಳು. 

ಅಲ್ಲಿಂದ ಮನೆಗೆ ಬಂದ ಓಂಕಾರಗೌಡ ಬೈಕ್ ಅನ್ನು ಮನೆಯಲ್ಲಿ ಬಿಟ್ಟು ತಿರುಪತಿಗೆ ಹೋಗಿದ್ದಾನೆ. ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಬರುವಾಗ ಕೊಪ್ಪಳದ ಬಳಿ ಓಂಕಾರಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT