ಸಿದ್ದರಾಮಯ್ಯ ಮತ್ತು ಮುಕುಡಪ್ಪ 
ರಾಜ್ಯ

'ಮುರುಘಾ ಸ್ವಾಮಿಗಿಂತ ನಮ್ ಟಗರು ಕಳ್ಳ, ಒಂದೇ ಸಾರಿ 20 ಕುರಿಗಳ ಮೇಲೆ ಬೀಳುತ್ತೆ; ಸಿದ್ದರಾಮಯ್ಯ ವಿರುದ್ಧ ಮುಖಂಡರ ಪಿಸುಮಾತು ವೈರಲ್

ರಾಜ್ಯದಲ್ಲಿ ಮತ್ತೊಂದು ಗುಸುಗುಸು.. ಪಿಸುಪಿಸು ಮಾತು ಬಹಿರಂಗವಾಗಿದ್ದು, ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ ಮತ್ತು ಎಸ್. ಪುಟ್ಟಸ್ವಾಮಿ ನಡುವಿನ ಮಾತುಕತೆ ವ್ಯಾಪಕ ವೈರಲ್ ಆಗಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಗುಸುಗುಸು.. ಪಿಸುಪಿಸು ಮಾತು ಬಹಿರಂಗವಾಗಿದ್ದು, ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ ಮತ್ತು ಎಸ್. ಪುಟ್ಟಸ್ವಾಮಿ ನಡುವಿನ ಮಾತುಕತೆ ವ್ಯಾಪಕ ವೈರಲ್ ಆಗಿದೆ.

ಕುರುಬ ಸಮುದಾಯದ ಕೆಎಸ್ ಈಶ್ವರಪ್ಪ ಅವರನ್ನು ಮತ್ತೆ ಸಂಪುಟ ಸೇರಿಸಿಕೊಳ್ಳವಂತೆ ಕರೆಯಲಾಗಿದ್ದ ಸುದ್ದಿಗೋಷ್ಠಿಗೂ ಮುನ್ನ ಸಿದ್ದರಾಮಯ್ಯನವರ ವೈಯಕ್ತಿಕ ಜೀವನದ ಬಗ್ಗೆ ಕುರುಬ ಸಮುದಾಯದ ಮುಖಂಡರಾದ ಮುಕುಡಪ್ಪ ಮತ್ತು ಎಸ್. ಪುಟ್ಟಸ್ವಾಮಿ ಪಿಸುಮಾತು ನಡೆಸಿದ್ದು, ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮುಕುಡಪ್ಪ ಅವರು ಸಿದ್ದರಾಮಯ್ಯರನ್ನು ಉದ್ದೇಶಿಸಿ, 'ಮುರುಘಾ ಸ್ವಾಮೀಜಿ ವಿಷಯ ಹೊರಬಂದಿದೆ. ನಮ್ಮ ಟಗರು ಏನ್ ಕಡಿಮೆನಾ? 20 ಕುರಿಗಳ ಮೇಲೆ ಒಂದು ಟಗರು ಎಗರಿ ಬೀಳುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದಾರೆ.

'ನಮ್ಮ ಟಗರು ಇದೆಯಲ್ಲಾ ಮುರುಘಾ ಸ್ವಾಮೀಜಿಯಂತೆ ಕಳ್ಳ...  ನಮ್ಮ ಟಗರು ಏನ್ ಕಡಿಮೆನಾ 20 ಕುರಿಗಳ ಮೇಲೆ ಒಂದು ಟಗರು ಎಗರಿ ಬೀಳುತ್ತೆ. ಕೆಲವರ ವಿಷಯ ಹೊರಬರುತ್ತೆ. ಇಂತ ವಿಚಾರಗಳಲ್ಲಿ ಸಿದ್ದು ತುಂಬಾ ಹುಷಾರು, ಮನೆ ಸೇರಿಕೊಂಡು ಬಿಡುತ್ತಾರೆ.. ಸಿದ್ಧರಾಮಯ್ಯ ನೋಡಿ ಕಲಿಯಬೇಕು ಎಂದು ಹೇಳಿದ್ದಾರೆ. ಇದಕ್ಕೆ ಎಸ್. ಪುಟ್ಟಸ್ವಾಮಿ ಅವರೂ ಕೂಡ ಧನಿಗೂಡಿಸಿದ್ದಾರೆ.

ಯಾರು ಈ ಮುಕುಡಪ್ಪ?
ಮುಕುಡಪ್ಪ ಅವರು ಕುರುಬ ಸಮುದಾಯದ ಪ್ರಮುಖ ನಾಯಕರಾಗಿದ್ದು, ಕೆಪಿಎಸ್ಸಿ ಮಾಜಿ ಸದಸ್ಯರಾಗಿದ್ದರು. ಮುಖ್ಯವಾಗಿ ಮಾಜಿ ಸಿದ್ದರಾಮಯ್ಯ ಅವರ ಆಪ್ತರ ಬಣದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಇನ್ನು ಮುಕುಡಪ್ಪ ಅವರೊಂದಿಗೆ ಮಾತಿಗೆ ಮಾತು ಸೇರಿಸಿದ್ದವರು ನಿವೃತ್ತ ಐಎಎಸ್ ಅಧಿಕಾರಿ ಎಸ್ ಪುಟ್ಟಸ್ವಾಮಿ. ಇವರೂ ಕೂಡ ಕೂಡ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ತಮ್ಮದೇ ಸಮುದಾಯದ ನಾಯಕನ ವಿರುದ್ಧ ಇವರು ಆಡಿರುವ ಮಾತುಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಈ ಹಿಂದೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ವಿರುದ್ಧವೂ ಇಂತಹುದ್ದೇ ಪಿಸುಮಾತು ವೈರಲ್ ಆಗಿತ್ತು. ಕಾಂಗ್ರೆಸ್ ಮುಖಂಡ ವಿಎಸ್ ಉಗ್ರಪ್ಪ ಸುದ್ದಿಗೋಷ್ಠಿ ವೇಳೆ ಆಡಿದ್ದ ಮಾತುಗಳು ವ್ಯಾಪಕ ವೈರಲ್ ಆಗಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT