ಶ್ಯಾಮನೂರು ಶಿವಶಂಕರಪ್ಪ 
ರಾಜ್ಯ

ಸ್ವಾಮೀಜಿಗಳ ಬಳಿ ಹೆಣ್ಣು ಮಕ್ಕಳು ಹೋಗಲಾರದಂತ ಸ್ಥಿತಿ ನಿರ್ಮಾಣ: ಮುರುಘಾ ಸ್ವಾಮೀಜಿ ವಿರುದ್ಧ ಶಾಮನೂರು ಸಿಡಿಮಿಡಿ

ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.

ಚಿತ್ರದುರ್ಗ: ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣನ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿ ಬಹಿರಂಗವಾದ ಬಳಿಕ ಲಿಂಗಾಯತ-ವೀರಶೈವ ಸಮಾಜದ ಮುಖಂಡರು ಸಿಟ್ಟಿಗೆದ್ದು ಪ್ರತಿಕ್ರಿಯಿಸುತ್ತಿದ್ದಾರೆ.

ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ನಡೆದ ನಾಟಕೋತ್ಸವ  ಸಮಾರಂಭದಲ್ಲಿ ಮಾತನಾಡಿದ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ‘ಹೆಣ್ಣು ಮಕ್ಕಳು ಸ್ವಾಮೀಜಿ ಬಳಿ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿ ಬರಬಾರದು. ನಮ್ಮ ಹೆಣ್ಣು ಮಕ್ಕಳು ಕೂಡ ಎಚ್ಚರವಾಗಿ ಇರಬೇಕು. ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸೂಕ್ತ ತೀರ್ಮಾನ ಮಾಡುತ್ತದೆ’ ಎಂದರು.

ಸರ್ಕಾರದಿಂದ ಸಹಾಯ ಬೇಕೆಂದು ಕೇಳುವುದು ನಾಚಿಕೆಗೇಡು. ನಮ್ಮ ಹೆಣ್ಣು ಮಕ್ಕಳು ಸಹ ಎಚ್ಚರವಾಗಿರಬೇಕು. ನಮ್ಮೆಲ್ಲರ ಒಗ್ಗಟ್ಟಿನಲ್ಲಿ ಶಕ್ತಿಯಿದೆ ಎಂಬುದು ವೀರಶೈವರು ಅರಿಯಬೇಕು. ಒಳಪಂಗಡ ಬೇಧ ಮರೆತು ವೀರಶೈವರು ಒಂದಾಗಬೇಕು. ಇವತ್ತಿನ ಸಮಾರಂಭದಲ್ಲಿ ಎಲ್ಲರೂ ಸರ್ಕಾರದ ಸಹಾಯ ಕೇಳುತ್ತಿದ್ದಾರೆ. ಸರ್ಕಾರದಿಂದ ಸಹಾಯ ಬೇಕೆಂದು ಕೇಳುವುದು ನಾಚಿಕೆಗೇಡು. ಸ್ವಾಭಿಮಾನದಿಂದ ನಾವು ಇರಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೇ ಟೀಕೆಗೆ ಗುರಿಯಾದ Pakistan vs West Indies ಟೆಸ್ಟ್ ಪಂದ್ಯ!

ಯೆನ್ ರಕ್ಷಣೆಗೆ ಅಮೇರಿಕಾ-ಜಪಾನ್ ಜಂಟಿ ಕಾರ್ಯಾಚರಣೆ, ಜಾಗತಿಕ ಹಣಕಾಸು ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ (ಹಣಕ್ಲಾಸು)