ಇಂಧನ ಕಲಬೆರಕೆ ನಡೆಯುತ್ತಿದ್ದ ಸ್ಥಳದಲ್ಲಿರುವ ಅಧಿಕಾರಿಗಳು. 
ರಾಜ್ಯ

ಸುರತ್ಕಲ್ ನಲ್ಲಿ ಕಲಬೆರಕೆ ಇಂಧನ ದಂಧೆ ಭೇದಿಸಿದ ಅಧಿಕಾರಿಗಳು!

ಸುರತ್ಕಲ್ ಪೊಲೀಸರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಂಗಳೂರು ಬಳಿ ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಕಲಬೆರಕೆ ದಂಧೆಯನ್ನು ಭೇದಿಸಿ 16,000 ಲೀಟರ್ ಜೆಟ್ ಇಂಧನ ಮತ್ತು ಎರಡು ಟ್ಯಾಂಕರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು: ಸುರತ್ಕಲ್ ಪೊಲೀಸರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಂಗಳೂರು ಬಳಿ ಏವಿಯೇಷನ್ ​​ಟರ್ಬೈನ್ ಫ್ಯೂಯಲ್ (ಎಟಿಎಫ್) ಕಲಬೆರಕೆ ದಂಧೆಯನ್ನು ಭೇದಿಸಿ 16,000 ಲೀಟರ್ ಜೆಟ್ ಇಂಧನ ಮತ್ತು ಎರಡು ಟ್ಯಾಂಕರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಾಳ ಒಟ್ಟೆಕಾಯರ್ ಜಂಕ್ಷನ್‌ನಲ್ಲಿರುವ ಯಾರ್ಡ್‌ನಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳು ಮಂಗಳೂರಿನ ತೈಲ ಸಂಸ್ಕರಣಾಗಾರಗಳಿಂದ ಖರೀದಿಸಿದ ಜೆಟ್ ಇಂಧನಕ್ಕೆ ಸೀಮೆಎಣ್ಣೆ ಬೆರೆಸಿ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಆರೋಪಿಗಳು ತ್ಯಾಜ್ಯ ಎಣ್ಣೆಯನ್ನು ಹಾಕಿ ಕಲಬೆರಕೆ ಮಾಡುತ್ತಿರುವುದು  ಈ ವೇಳೆ ಕಂಡು ಬಂದಿದೆ. ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಯಾವ ಉದ್ದೇಶಕ್ಕಾಗಿ ಇಂಧನವನ್ನು ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದರು ಎಂಬುದು ಇನ್ನೂ ತಿಳಿದುಬಂದಿಲ್ಲ.

ಆರೋಪಿಗಳು ಸುರಂಗದಲ್ಲಿ ಟ್ಯಾಂಕ್ ಗಳನ್ನು ಇರಿಸಿದ್ದರು. ದಾಳಿ ವೇಳೆ ರೂ.40 ಲಕ್ಷ ಮೌಲ್ಯದ ಎರಡು ಟ್ಯಾಂಕರ್, 16 ಸಾವಿರ ಲೀಟರ್ ಎಟಿಎಫ್, ಬ್ಯಾರೆಲ್, ಜನರೇಟರ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಗಳು ಪೆಟ್ರೋಲಿಯಂ ಉತ್ಪನ್ನಗಳನ್ನು ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದರು ಎಂದು ದಕ್ಷಿಣ ಕನ್ನಡ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಾಣಿಕ್ಯ ತಿಳಿಸಿದ್ದಾರೆ.

ನಮಗೆ ತಿಳಿದುಬಂದಿರುವ ಮಾಹಿತಿಗಳ ಪ್ರಕಾರ, ಕಲಬೆರಕೆ ಎಟಿಎಫ್ ಇಂಧನವನ್ನು ವಿಮಾನಗಳಲ್ಲಿ ಹೊರತುಪಡಿಸಿ ಬೇರೆಲ್ಲಿಯೂ ಬಳಸಲಾಗುವುದಿಲ್ಲ. ಆರೋಪಿಗಳು ಅದನ್ನು ಸೀಮೆಎಣ್ಣೆಯಾಗಿ ಮಾರಾಟ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

ಸುರಂಗದಲ್ಲಿ ದೊಡ್ಡ ಪ್ರಮಾಣದಲ್ಲಿ ತೈಲವನ್ನು ಸಂಗ್ರಹಿಸಲಾಗಿತ್ತು. ಕೈಗಾರಿಕೆಗಳಲ್ಲಿ ಹೆಚ್ಚಾಗಿ ಬಳಸುವ ಫರ್ನೇಸ್ ಆಯಿಲ್ ಕೂಡ ಕಲಬೆರಕೆ ಮಾಡಲಾಗಿದೆ. ಟ್ಯಾಂಕರ್ ಚಾಲಕರು ಹಾಗೂ ಮಾಲೀಕರು ಈ ದಂಧೆಯಲ್ಲಿ ಯಾವ ರೀತಿಯಲ್ಲಿ ಭಾಗಿಯಾಗಿದ್ದಾರೆಂಬುದನ್ನು ತನಿಖೆ ಮಾಡಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ