ವೀರ್ ದಾಸ್ 
ರಾಜ್ಯ

ಬಲಪಂಥೀಯ ಸಂಘಟನೆಗಳ ವಿರೋಧ, ವೀರ್ ದಾಸ್ ಕಾರ್ಯಕ್ರಮ ರದ್ದು; ವಿಡಿಯೋ ಬಿಡುಗಡೆ ಮಾಡಿದ ಹಾಸ್ಯ ಕಲಾವಿದ

ಬಲಪಂಥೀಯ ಸಂಘಟನೆಗಳ ವಿರೋಧದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹಾಸ್ಯ ಕಲಾವಿದ ವೀರ್ ದಾಸ್ ಕಾರ್ಯಕ್ರಮ ರದ್ದಾಗಿದ್ದು, ಈ ಸಂಬಂಧ ಕಲಾವಿದ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರು: ಬಲಪಂಥೀಯ ಸಂಘಟನೆಗಳ ವಿರೋಧದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹಾಸ್ಯ ಕಲಾವಿದ ವೀರ್ ದಾಸ್ ಕಾರ್ಯಕ್ರಮ ರದ್ದಾಗಿದ್ದು, ಈ ಸಂಬಂಧ ಕಲಾವಿದ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇಂದು ನಡೆಯಬೇಕಿದ್ದ ವೀರ್ ದಾಸ್ ಹಾಸ್ಯ ಕಾರ್ಯಕ್ರಮ ರದ್ದಾಗಿದೆ. ಇಂದು ಬೆಳಗ್ಗೆಯಿಂದ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸುತ್ತಿತ್ತು. ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಆಯೋಜಕರು ಹಾಸ್ಯ ಕಾರ್ಯಕ್ರಮ ರದ್ದು ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ನಗರದಲ್ಲಿ ವೀರ್ ದಾಸ್ ಅವರ ಎರಡು ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಭಾರೀ ವಿರೋಧ ಮತ್ತು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

ವಿರೋಧ ಯಾಕೆ?
ಅಮೆರಿಕದಲ್ಲಿ ಭಾರತದ ಬಗ್ಗೆ ಅತ್ಯಂತ ಕೆಟ್ಟದಾಗಿ ವೀರ್ ದಾಸ್ ಹಾಸ್ಯ ಮಾಡಿ ಅವಹೇಳನ ಮಾಡಿದ್ದಾನೆ. ಈ ಕಾರಣಕ್ಕಾಗಿ ಮುಂಬೈ ಪೋಲಿಸರು ಇವನ ಮೇಲೆ ಪ್ರಕರಣವನ್ನು ದಾಖಲಿಸಿದ್ದರು. ವಿದೇಶದಲ್ಲಿ ಭಾರತದ ಪ್ರಧಾನಿ ಮತ್ತು ಭಾರತದ ಮಹಿಳೆಯರ ವಿರುದ್ಧ ಮತ್ತು ಭಾರತದ ಘನತೆಯ ಬಗ್ಗೆ ಅತ್ಯಂತ ಕೆಟ್ಟದಾಗಿ ಅಪಮಾನ ಮಾಡಿದ ವ್ಯಕ್ತಿಯ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದಲ್ಲಿ ಅವಕಾಶ ಕೊಡಬಾರದು ಎಂದು ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

ಅಲ್ಲದೆ ಈತ ಕೆಲವು ದಿನಗಳ ಹಿಂದೆ ಅಮೇರಿಕದ ವಾಷಿಗ್ಟನ್ ಡಿಸಿಯಲ್ಲಿ ಮಾತನಾಡಿದ ಒಂದು ವಿಡಿಯೋದಲ್ಲಿ ತಾನು ಮಹಿಳೆಯರನ್ನು ಬೆಳಗ್ಗೆ ಪೂಜೆ ಮಾಡಿ ರಾತ್ರಿ ಅವರ ಮೇಲೆ ಅತ್ಯಾಚಾರ ಮಾಡುವ ಭಾರತದಿಂದ ಬಂದಿದ್ದೇನೆ ಎಂದು ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಅಪಮಾನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದು ಭಾರತದ ದಂಡ ಸಂಹಿತೆಯ ಪ್ರಕಾರ ಗಂಭೀರ ಅಪರಾಧವಾಗಿದೆ. ಹೀಗಿರುವಾಗ ಇಂತಹ ವಿವಾದಿತ ವ್ಯಕ್ತಿ ಬೆಂಗಳೂರಿನಂತಹ ಅತ್ಯಂತ ಕೋಮು ಸೂಕ್ಚ್ಮ ಪ್ರದೇಶದಲ್ಲಿ ಈ ರೀತಿಯ ವಿವಾದಿತ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದು ಸರಿಯಲ್ಲ.

ಈಗಾಗಲೇ ಕರ್ನಾಟಕದಲ್ಲಿ ಕೋಮು ಘಟನೆಗಳ ಪ್ರಕರಣದಿಂದ ಅನೇಕ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಎದುರಿಸುತ್ತಿರುವಾಗ ಪುನಃ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಕೂಡಲೇ ಈ ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ದೂರು ನೀಡಿದ್ದವು.

ವಿಡಿಯೋ ಬಿಡುಗಡೆ ಮಾಡಿದ ಹಾಸ್ಯ ಕಲಾವಿದ
ಜಸ್ಟ್ ಇನ್ ಕೇಸ್ ಎಂಬ ನನ್ನ ಶೋ ಒಂದರ ನಂತರ ನಾನು ಈ ವೀಡಿಯೊವನ್ನು ಮಾಡಿದ್ದೇನೆ. ಮಾಧ್ಯಮದ ಮುಖ್ಯಾಂಶಗಳಿಗೆ ನನ್ನ ಬಳಸುವುದರಲ್ಲಿ ನನಗೆ ಆಸಕ್ತಿಯಿಲ್ಲ. ನಾನೊಬ್ಬ ಕಲಾವಿದ. ನಾನು ಸುದ್ದಿಯಲ್ಲಿ ಇರಬಾರದು. ನನ್ನ ವಿಷಯದ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗಿದೆ. ನನ್ನ ಕಲೆ ಮತ್ತು ನನ್ನ ಪ್ರೇಕ್ಷಕರು ನನ್ನ ಪರವಾಗಿ ಮಾತನಾಡುತ್ತಾರೆ ಎಂದು ನಾನು ನಂಬುತ್ತೇನೆ ಎಂದು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT